ಉತ್ತರಪ್ರಭ ಸುದ್ದಿ
ಬೆಂಗಳೂರು:
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ನೇಮಕವಾದ ಹಾಗೂ ಅನುಮೋದನೆಯಾದ ಮೂಲ ಗ್ರಾಮ ಪಂಚಾಯತಿದ ಅನ್ಯ ತಾಲ್ಲೂಕು/ಗ್ರಾಮ ಪಂಚಾಯತಿಗಳಿಗೆ ನಿಯೋಜನೆ ಅಥವಾ ವರ್ಗಾವಣೆಯನ್ನು ಮಾಡಲಾಗಿದ್ದು, ಸದರಿ ಆದೇಶಗಳನ್ನು ರದ್ದುಪಡಿಸಿ ನೇಮಕವಾದ ಮೂಲ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸುವಂತೆ ಕರ್ನಾಟಕ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡೇಟಾ ಎಂಟ್ರಿ ಅಪರೇಟರ್ ನೌಕರರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಭೀಮರಡಿ ಪೋ ಪಾಟೀಲ್, ಅವರು ದಿನಾಂಕ 21-03-2021 ರಂದು ಮನವಿಯಲ್ಲಿ ಮನವಿ ಸಲ್ಲಿಸಲಾಗಿತ್ತು,
ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳು, 2020ನ್ನು ಹೊರಡಿಸಲಾಗಿದ್ದು, ಗ್ರಾಮ ಪಂಚಾಯತಿಯ ಸಿಬ್ಬಂದಿಗಳ ನೇಮಕಾತಿ ಆಯಾ ಗ್ರಾಮ ಪಂಚಾಯತಿಗಳಾಗಿರುತ್ತದೆ ಹಾಗೂ ಶಿಸ್ತು ಪ್ರಾಧಿಕಾರವು ಆಯಾ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾಗಿರುತ್ತಾರೆ. ಗ್ರಾಮ ಪಂಚಾಯತಿಯ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಯು ಗ್ರಾಮ ಪಂಚಾಯತಿಯ ಸಿಬ್ಬಂದಿ ಮಾದರಿಯಲ್ಲಿ ಒಂದು ಹುದ್ದೆಯಾಗಿರುವುದರಿಂದ ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ನೇಮಕವಾದ ಮೂಲ ಗ್ರಾಮ ಪಂಚಾಯತಿಯಿAದ ಅನ್ಯ ಜಿಲ್ಲಾ/ತಾಲ್ಲೂಕು/ಗ್ರಾಮ ಪಂಚಾಯತಿಗೆ ವರ್ಗಾಯಿಸಲು ಅಥವಾ ನಿಯೋಜಿಸಲು ಅವಕಾಶವಿರುವುದಿಲ್ಲ. ಆದ್ದರಿಂದ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ನೇಮಕವಾದ ನೌಕರರು ಅವರು ನೇಮಕಗೊಂಡ ಮೂಲ ಗ್ರಾಮ ಪಂಚಾಯತಿಯಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ, ಇಂತಹ ಸಿಬ್ಬಂದಿಗಳನ್ನು ಅನ್ಯ ಜಿಲ್ಲಾ/ ತಾಲ್ಲೂಕು/ ಗ್ರಾಮ ಪಂಚಾಯತಿಗಳಿಗೆ ವರ್ಗಾಯಿಸಿದಲ್ಲಿ ಅಥವಾ ನಿಯೋಜಿಸಿದಲ್ಲಿ ಅಂತಹ ಆದೇಶಗಳನ್ನು ಕೂಡಲೇ ರದ್ದುಪಡಿಸಿ, ನೌಕರರು ನೇಮಕವಾದ ಮೂಲ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ವಹಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.

ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಡಚಣ್ಣವರ

ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

ನ. 23ರ ವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ!

ಧಾರವಾಡ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಬಿ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ. 23ರ ವರೆಗೂ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ಸೋನಿಯಾ ವಿರುದ್ಧ ಕೇಸ್ ಬಿಡಲು ಸಿಎಂ ಸಿದ್ಧ: ಬಿಜೆಪಿ ವಿರೋಧ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ಕೈಬಿಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದು,