ಉತ್ತರಪ್ರಭ ಸುದ್ದಿ
ಬೆಂಗಳೂರು:
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಿಬ್ಬಂದಿಗಳನ್ನು ನೇಮಕವಾದ ಹಾಗೂ ಅನುಮೋದನೆಯಾದ ಮೂಲ ಗ್ರಾಮ ಪಂಚಾಯತಿದ ಅನ್ಯ ತಾಲ್ಲೂಕು/ಗ್ರಾಮ ಪಂಚಾಯತಿಗಳಿಗೆ ನಿಯೋಜನೆ ಅಥವಾ ವರ್ಗಾವಣೆಯನ್ನು ಮಾಡಲಾಗಿದ್ದು, ಸದರಿ ಆದೇಶಗಳನ್ನು ರದ್ದುಪಡಿಸಿ ನೇಮಕವಾದ ಮೂಲ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸುವಂತೆ ಕರ್ನಾಟಕ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡೇಟಾ ಎಂಟ್ರಿ ಅಪರೇಟರ್ ನೌಕರರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಭೀಮರಡಿ ಪೋ ಪಾಟೀಲ್, ಅವರು ದಿನಾಂಕ 21-03-2021 ರಂದು ಮನವಿಯಲ್ಲಿ ಮನವಿ ಸಲ್ಲಿಸಲಾಗಿತ್ತು,
ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳು, 2020ನ್ನು ಹೊರಡಿಸಲಾಗಿದ್ದು, ಗ್ರಾಮ ಪಂಚಾಯತಿಯ ಸಿಬ್ಬಂದಿಗಳ ನೇಮಕಾತಿ ಆಯಾ ಗ್ರಾಮ ಪಂಚಾಯತಿಗಳಾಗಿರುತ್ತದೆ ಹಾಗೂ ಶಿಸ್ತು ಪ್ರಾಧಿಕಾರವು ಆಯಾ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾಗಿರುತ್ತಾರೆ. ಗ್ರಾಮ ಪಂಚಾಯತಿಯ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಯು ಗ್ರಾಮ ಪಂಚಾಯತಿಯ ಸಿಬ್ಬಂದಿ ಮಾದರಿಯಲ್ಲಿ ಒಂದು ಹುದ್ದೆಯಾಗಿರುವುದರಿಂದ ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ನೇಮಕವಾದ ಮೂಲ ಗ್ರಾಮ ಪಂಚಾಯತಿಯಿAದ ಅನ್ಯ ಜಿಲ್ಲಾ/ತಾಲ್ಲೂಕು/ಗ್ರಾಮ ಪಂಚಾಯತಿಗೆ ವರ್ಗಾಯಿಸಲು ಅಥವಾ ನಿಯೋಜಿಸಲು ಅವಕಾಶವಿರುವುದಿಲ್ಲ. ಆದ್ದರಿಂದ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ನೇಮಕವಾದ ನೌಕರರು ಅವರು ನೇಮಕಗೊಂಡ ಮೂಲ ಗ್ರಾಮ ಪಂಚಾಯತಿಯಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ, ಇಂತಹ ಸಿಬ್ಬಂದಿಗಳನ್ನು ಅನ್ಯ ಜಿಲ್ಲಾ/ ತಾಲ್ಲೂಕು/ ಗ್ರಾಮ ಪಂಚಾಯತಿಗಳಿಗೆ ವರ್ಗಾಯಿಸಿದಲ್ಲಿ ಅಥವಾ ನಿಯೋಜಿಸಿದಲ್ಲಿ ಅಂತಹ ಆದೇಶಗಳನ್ನು ಕೂಡಲೇ ರದ್ದುಪಡಿಸಿ, ನೌಕರರು ನೇಮಕವಾದ ಮೂಲ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ವಹಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.

ಮೀಟರ್ ಬಡ್ಡಿಗೆ ಬ್ರೆಕ್ ಹಾಕಲು ಮುಂದಾದ ಸರ್ಕಾರ

ಈ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಹೊರಟಿರುವಂತ ರಾಜ್ಯ ಸರ್ಕಾರ, ಕಾಯ್ದೆಯ ತಿದ್ದುಪಡಿಗೂ ನಿನ್ನೆಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಒಂದು ವೇಳ ತಿದ್ದುಪಡಿಯಾಗಿ, ಜಾರಿಗೆ ಬಂದ್ರೆ, ಬಲವಂತವಾಗಿ ಸಾಲ ವಸೂಲಾತಿಗೆ ಬ್ರೇಕ್ ಬೀಳಲಿದೆ.

7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!

ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.