ಉತ್ತರಪ್ರಭ

ಗದಗ: ರಾಜ್ಯದಲ್ಲಿ ಪಿ ಎಫ್ ಐ. ಎಸ್ ಡಿ ಪಿ ಐ. ಸಂಘಟನೆಗಳನ್ನ ರಾಜ್ಯ ಸರ್ಕಾರ ಕೂಡಲೇ ಬ್ಯಾನ್ ಮಾಡಬೇಕೆಂದು ಕ್ರಾಂತಿ ಸೇನಾ ಗದಗ ಜಿಲ್ಲಾ ಅಧ್ಯಕ್ಷ ಬಾಬು ಬಾಕಳೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಗೃಹ ಸಚಿವರಿಗೆ ಒತ್ತಾಯಿಸಿ ಹಿಂದೂ ಕಾರ್ಯಕರ್ತನ ಗುರಿಯಾಗಿಸಿಕೊಂಡು ಹತ್ಯೆ ನಡೆಸುತ್ತಿರುವ ದೇಶದ್ರೋಹಿ ಸಂಘಟನೆಗಳನ್ನ ಬ್ಯಾನ್ ಮಾಡುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ಹಿಂದುಗಳ ರಕ್ಷಣೆಗಾಗಿ ಪರ್ಯಾಯ ರಾಜಕೀಯ ಶಕ್ತಿ ಬೇಕಾಗಿದೆ ಆದರೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಕೂಡ ಹಿಂದುಗಳ ರಕ್ಷಣೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಸರ್ಕಾರ ಉಗ್ರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಡೆಮುರು ಕಟ್ಟುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ಒಬ್ಬ ಕೊಲೆಗಡಕರ ವ್ಯಕ್ತಿಗೂ ಶಿಕ್ಷೆ ಆಗಿಲ್ಲ ಎಲ್ಲರೂ ಬೇಲ್ ಮೂಲಕ ಹೊರಗೆ ಬಂದು ಜೀವನ ನಡೆಸುತ್ತಿದ್ದಾರೆ. ಈ ಹಿಂದೆ ಬಜರಂಗದಳ ಕಾರ್ಯಕರ್ತ ಹರ್ಷನ ಕೊಂದ ಕೊಲೆ ಗಡುಕರಿಗೆ ಜೈಲಿನಲ್ಲಿ ಮೊಬೈಲ್ ನೀಡುವ ಮುಖಾಂತರ ಎಲ್ಲ ರೀತಿಯ ಸೌಲತ್ತನ ಕೊಲೆ ಗಡುಕರಿಗೆ ನೀಡಿರುವುದು ಇದನ್ನ ರಾಜ್ಯದ ಜನತೆ ಮಾಧ್ಯಮದಲ್ಲಿ ಕಣ್ಣಾರೆ ನೋಡಿದ್ದಾರೆ ಹೀಗಾಗಿ ಹಿಂದುಗಳಿಗೆ ಸರ್ಕಾರದ ಮೇಲೆ ಭರವಸೆ ಕಡಿಮೆಯಾಗುತ್ತಿದೆ. ರಾಜ್ಯ ಸರ್ಕಾರ ವಿಶ್ವಾಸ ಕಳೆದುಕೊಳ್ಳುತ್ತಿದೆ.

ಈ ಕೂಡಲೇ ಸರ್ಕಾರ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ರೀತಿಯಲ್ಲಿ ಕಠಿಣ ಕಾನೂನು ಕ್ರಮ ಕರ್ನಾಟಕ ಸರ್ಕಾರಕ್ಕೆ ಅವಶ್ಯವಾಗಿ ಕೈಗೊಳ್ಳಬೇಕಾಗಿದೆ, ಎಂದರು ಸುಳ್ಳಾದ ಬಿಜೆಪಿ ಕಾರ್ಯಕರ್ತ ಪ್ರವೀಣ ಇವರಿಗೆ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಎನ್ಕೌಂಟರ್ ಮಾಡಬೇಕು. ಹಾಗೂ ಪ್ರವೀಣ ಅವರ ಮನೆಗೆ ತೆರಳಿ ಅವರ ತಂದೆ ತಾಯಿ ಹೆಂಡತಿಗೆ ಹಾಗೂ ಕುಟುಂಬದವರಿಗೆ ಸ್ವಂತನ ಹೇಳುವ ಕೆಲಸ ಮಾಡಲಿ ಹಾಗೂ ಅವರ ಹೆಂಡತಿಗೆ ಸರ್ಕಾರಿ ನೌಕರಿ ನೀಡಿಲಿ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಿ ಕುಟುಂಬಕ್ಕೆ ನೆರವಾಗಲಿ ಎಂದು ಪತ್ರಿಕಾ ಪ್ರಕಟಣೆ ಮುಖಾಂತರ ಕ್ರಾಂತಿ ಸೇನಾ ಗದಗ ಜಿಲ್ಲಾ ಅಧ್ಯಕ್ಷ ಬಾಬು ಬಾಕಳೆ ಪ್ರಕಟಣೆಯ ಮುಖಾಂತರ ಹೇಳಿದರು.

Leave a Reply

Your email address will not be published. Required fields are marked *

You May Also Like

ಪವರ ಸ್ಟಾರ್ ಅಭಿಮಾನಿ ಹೃದಯಾಘಾತದಿಂದ ಸಾವು

ಉತ್ತರಪ್ರಭನಂಜನಗೂಡು: ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ…

ಸಿಡಿ ಪ್ರಕರಣ ನ್ಯಾಯಾಲಯಕ್ಕೆ ಮೊರೆ ಹೋದ ಆರು ಸಚಿವರು : ಇಂದು ಅರ್ಜಿ ವಿಚಾರಣೆ

ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ.

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಸಲೂನ್ ಪಾರ್ಲರ್ ಗಳಿಗೆ ಹೋಗುವ ಮುನ್ನ ಈ ಸುಚನೆಗಳನ್ನೊಮ್ಮೆ ಓದಿ..

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್’ಗಳು…