ನರಗುಂದ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಶ್ರೀ ಸಿದ್ದೇಶ್ವರ ಪ್ರಥಮ ದರ್ಜೆ ಕಾಲೇಜು ನರಗುಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಕಾಲೇಜ್ ಕಬಡ್ಡಿ ಲೀಗ್’ ಎಂಬ ಹೆಸರಿನಡಿ ಕಬಡ್ಡಿ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು. ಕಬಡ್ಡಿ ರಾಷ್ಟೀಯ ಕ್ರೀಡೆಯಾಗಿ ಬೆಳೆದು ನಿಂತಿರುವುದು ಹೆಮ್ಮೆಯ ವಿಷಯವಾಗಿದೆ. ಕಬಡ್ಡಿ ಒಂದು ಆಕರ್ಷಣೀಯ ಮತ್ತು ಮಹತ್ವದ ಕ್ರೀಡೆಯಾಗಿದೆ. ನಮ್ಮ ಕಾಲೇಜಿನಲ್ಲಿ ಕಬಡ್ಡಿ ಕ್ರೀಡೆಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಮೊದಲಿನಿಂದಲೂ ಆಯ್ಕೆ ಆಗಿದ್ದಾರೆ ಆದರೆ ಮೊದಲ ಬಾರಿಗೆ 10 ಜನ ವಿದ್ಯಾರ್ಥಿನಿಯರು ಒಂದೇ ಕಾಲೇಜಿನಿಂದ ಆಯ್ಕೆ ಆಗಿದ್ದು ನಮ್ಮ ಕಾಲೇಜಿನ ವಿಶೇಷ ಎಂದು ಪ್ರೊ ಸೌದಾಗರ್ ಅವರು ಹೇಳಿದರು. ನಂತರ ಮಾತನಾಡಿದ ಪ್ರೊ p s ಅಣ್ಣಿಗೇರಿ ಅವರು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು, ಕ್ರೀಡೆಯಲ್ಲಿ ಸೋಲು ಗೆಲವು ಇದ್ದಿದ್ದೇ ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದರು.

ಕಬಡ್ಡಿ ಪಂದ್ಯಾವಳಿಯಲ್ಲಿ ಬಿ ಎ ಅಂತಿಮ ವರ್ಷದ ವಿದ್ಯಾರ್ಥಿಗಳ ರಾಯಲ್ ಬಾಯ್ಸ್ ಜಯಶಾಲಿ ಆದರೆ, ವಿದ್ಯಾರ್ಥಿನಿಯರ ಪಂದ್ಯಾವಳಿಗಳಲ್ಲಿ ಬಿ ಎ ಅಂತಿಮ ವರ್ಷದ ವಿದ್ಯಾರ್ಥಿನಿಯರು ಜಯಶಾಲಿಗಳಾದರು. ಪ್ರಶಸ್ತಿ ವಿತರಣಾ ಸಮಾರಂಭಕ್ಕೆ ಆಗಮಿಸಿದ್ದ ಪುರಸಭೆ ಸದಸ್ಯ ರಚನಾಗೌಡ ಪಾಟೀಲ ಮಾತನಾಡಿ ಪ್ರತಿ ವರ್ಷ ಇದೇ ರೀತಿ ಕಾಲೇಜು ಮಟ್ಟದಲ್ಲಿ ಕ್ರೀಡಾ ಕೂಟಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಚಾರ್ಯರಾದ m.d. ಕಮತಗಿ, ಪ್ರೊ p.s.ಅಣ್ಣಿಗೇರಿ, ಪ್ರೊ ಸೌದಾಗಾರ್ ಮತ್ತು ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆಗಳ ವಿಚಾರದಲ್ಲಿ ಪತ್ರಗಳ ತಾಪತ್ರೆಯ ತಪ್ಪೋದು ಯಾವಾಗ?

ಒಂದು ಮಾದ್ಯಮವಾಗಿ ಉತ್ತರಪ್ರಭ ಜನಪರವಾಗಿ ಕಾರ್ಯ ಮಾಡುತ್ತಿರುವಾಗ ಆಡಳಿತ ಯಂತ್ರಕ್ಕೆ ಮಾತ್ರ ಈ ವಿಚಾರದ ಗಂಭೀರತೆಯ ಅರ್ಥವಾಗುತ್ತಿಲ್ಲವೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ಈಗಾಗಲೇ ಶಿರಹಟ್ಟಿ ಪಟ್ಟಣದಲ್ಲಿರುವ ಕಟ್ಟಿಗೆ ಅಡ್ಡೆಗಳ ವಿಚಾರವಾಗಿ ಸೂಕ್ತ ಕ್ರಮಕ್ಕಾಗಿ ಶಿರಹಟ್ಟಿ ತಹಶೀಲ್ದಾರ್ ಸ್ಥಳೀಯ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಆದೇಶಿಸಿದ್ದರು.

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಲೇಟ್ ನೈಟ್ ಪಾರ್ಟಿ ನಿಷೇಧಿಸಿದ ಕರ್ನಾಟಕ ಸರ್ಕಾರ

ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಗುರುವಾರದಿಂದ ಲೇಟ್ ನೈಟ್ ಪಾರ್ಟಿಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯದ ಎಲ್ಲಾ ಸ್ಟಾರ್ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಿಗೆ ಸೂಚಿಸಲಾಗಿದೆ ಎಂದು ಸುಧಾಕರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…

ಸಾಮಾಜಿಕ ನ್ಯಾಯ ಒದಗಿಸಿ ಮುಸ್ಟೂರು ದಲಿತ ಯುವಕರಿಂದ ಮನವಿ

ಉತ್ತರಪ್ರಭ ಕಾರಟಗಿ: ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಅಸ್ಪೃಶ್ಯತೆಯ ಆಚರಣೆಯು ಇಂದಿಗೂ ಜೀವಂತವಾಗಿದ್ದು, ಗ್ರಾಮದಲ್ಲಿ ವಾಸಿಸುವ 85ಕ್ಕೂ…