ಉತ್ತರಪ್ರಭ

ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು, ಸಾರಸ್ವತಲೋಕದ ಖ್ಯಾತ ರಸ ವಿಮರ್ಶಕರು, ಸಾಹಿತ್ಯ ಶ್ರೀ ಪುರಸ್ಕೃತ ವಿಖ್ಯಾತ ವಾಗ್ಮಿ ಡಾ.ವಿ.ಎಸ್.ಮಾಳಿ ಅವರ “ತಿಳಿಗೊಳ” ಅಭಿನಂದನ ಗ್ರಂಥದ ಲೋಕಾರ್ಪಣೆ, ಹಾಗೂ ಗುರುವಂದನ ಕಾರ್ಯಕ್ರಮ ರವಿವಾರ ದಿನಾಂಕ 31 ರಂದು ಬೆಳಿಗ್ಗೆ 10 ಗಂಟೆಗೆ ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಬಿ. ಆರ್ ದರೂರ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆರವೇರಲಿದೆ. ವಿಜಯಪುರ ಜ್ಞಾನ ಯೋಗಾಶ್ರಮದ “ಭೂಜನ ಜ್ಯೋತಿ”,ನಡೆದಾಡುವ ದೇವರು” ಪರಮಪೂಜ್ಯ ಸಿದ್ದೇಶ್ವರ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಚೇರಮನ್ ಗಿರೀಶ್ ದರೂರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕುಡಚಿ ಕ್ಷೇತ್ರದ ಜನಪ್ರಿಯ ಶಾಸಕರು, ಚಿಂತನಶೀಲ ರಾಜಕಾರಣಿ ಪಿ.ರಾಜೀವ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಸ್ಥಳೀಯ ಜನತಾ ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಪಾಟೀಲ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಸಂಕೇಶ್ವರದ ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ಹಾಗೂ ಹಿರಿಯ ಸಾಹಿತಿಗಳಾದ ಡಾ. ಗುರುಪಾದ ಮರಿಗುದ್ದಿ ಗ್ರಂಥ ಪರಿಚಯಿಸಲಿದ್ದಾರೆ. ಅಥಣಿಯ ವಿಮೋಚನಾ ಸಂಸ್ಥೆಯ ಅಧ್ಯಕ್ಷರು ಶಿವಶರಣರಾದ ಬಿ.ಎಲ್. ಪಾಟೀಲ ಅಭಿನಂದನ ನುಡಿಗಳನ್ನಾಡಲಿದ್ದಾರೆ.ಡಾ.ಸಿ.ಬಿ.ಕುಲಿಗೋಡ,ಹಾಗೂ ಕಾಡಪ್ಪಣ್ಣ ಮಾಳಿ ಅವರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ.
ಅಪರಾಹ್ನ 2.30 ಕ್ಕೆ “ಗುರುವಂದನ” ಹಾಗೂ “ವೃಷಭಶ್ರೀ” ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆಯನ್ನು ಸ್ಥಳೀಯ ಗಣ್ಯ ನಾಗರೀಕರಾದ ಡಿ.ಸಿ. ಸದಲಗಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ ಸದಸ್ಯರು ಮಾನ್ಯ ಹನಮಂತ ನಿರಾಣಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಮುಖ್ಯ ಅತಿಥಿಗಳಾಗಿ ಅಗಮಿಸಲಿದ್ದಾರೆ. ಸ್ಥಳೀಯ ಖ್ಯಾತ ವೈದ್ಯರಾದ ಡಾ.ಎಲ್.ಎಸ್. ಜಂಬಗಿ, ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ರಾಮಣ್ಣ ಗಸ್ತಿ, ವೃಷಭೇಂದ್ರ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಆರ್ ಎಸ್ ಯಲಶೆಟ್ಟಿ, ಶರಣ ವಿಚಾರ ವಾಹಿನಿಯ ಅಧ್ಯಕ್ಷರಾದ ಶಿವಶರಣ ಅಯ್.ಆರ್. ಮಠಪತಿ ಗಣ್ಯರಾದ ,ಬಸಗೌಡ ಆಸಂಗಿ,ಹಾಗೂ ಪ್ರಾ.ಬಿ.ಎ. ಜಂಬಗಿ ಆಗಮಿಸಲಿದ್ದಾರೆ. ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ಗೌರವಾಧ್ಯಕ್ಷರು, ಹಾಗೂ ಜಮಖಂಡಿಯ ಉಪವಿಭಾಗಾಧಿಕಾರಿ ಡಾ.ಸಿದ್ದು ಹುಲ್ಲೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕತ್ತಿ ವರಸೆಗೆ ಶಾಕ್ ಕೊಟ್ರು ಸಿಎಂ..!

ಇತ್ತೀಗಷ್ಟೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಉಮೇಶ್ ಕತ್ತಿ, ಡಿನ್ನರ್ ಪಾಲಿಟಿಕ್ಸ್ ನಡೆಸಿದ್ರು. ಇದರಲ್ಲಿ ಕೆಲವು ಅತೃಪ್ತ ಶಾಸಕರು ಭಾಗವಹಿಸಿದ್ದು ಬಿಜೆಪಿಯಲ್ಲಿ ಕುಚ್… ಕುಚ್ ಹೋ ರಹಾ ಹೈ ಎಂಬ ಚರ್ಚೆಗೆ ಮುನ್ನುಡಿ ಬರೆದಿತ್ತು. ಉಮೇಶ್ ಕತ್ತಿ ಮನೆಯಲ್ಲಿ ಶೀಕರಣಿ ಊಟದ ರಾಜಕಾರಣದ ಬೆನ್ನಲ್ಲೆ ಸಿಎಂ ಬಿಎಸ್ವೈ ಪರ ಹಾಗೂ ವಿರೋಧ ಚರ್ಚೆಗಳು ನಡೆದವು. ಇದು ಸ್ವತ: ಸಿಎಂ ಯಡಿಯೂರಪ್ಪ ಅವರಿಗೂ ಮುಜುಗುರ ತಂದಿರಬಹುದು. ಆದರೆ ಬಿಎಸ್ವೈ ಹೈಕಮಾಂಡ್ ಮಟ್ಟದಲ್ಲಿ ಇನ್ನು ಪವರ್ ಫುಲ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ಸಾಕ್ಷಿಯಾಗಿದೆ.

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.