ಉತ್ತರಪ್ರಭ

ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು, ಸಾರಸ್ವತಲೋಕದ ಖ್ಯಾತ ರಸ ವಿಮರ್ಶಕರು, ಸಾಹಿತ್ಯ ಶ್ರೀ ಪುರಸ್ಕೃತ ವಿಖ್ಯಾತ ವಾಗ್ಮಿ ಡಾ.ವಿ.ಎಸ್.ಮಾಳಿ ಅವರ “ತಿಳಿಗೊಳ” ಅಭಿನಂದನ ಗ್ರಂಥದ ಲೋಕಾರ್ಪಣೆ, ಹಾಗೂ ಗುರುವಂದನ ಕಾರ್ಯಕ್ರಮ ರವಿವಾರ ದಿನಾಂಕ 31 ರಂದು ಬೆಳಿಗ್ಗೆ 10 ಗಂಟೆಗೆ ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಬಿ. ಆರ್ ದರೂರ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆರವೇರಲಿದೆ. ವಿಜಯಪುರ ಜ್ಞಾನ ಯೋಗಾಶ್ರಮದ “ಭೂಜನ ಜ್ಯೋತಿ”,ನಡೆದಾಡುವ ದೇವರು” ಪರಮಪೂಜ್ಯ ಸಿದ್ದೇಶ್ವರ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಚೇರಮನ್ ಗಿರೀಶ್ ದರೂರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕುಡಚಿ ಕ್ಷೇತ್ರದ ಜನಪ್ರಿಯ ಶಾಸಕರು, ಚಿಂತನಶೀಲ ರಾಜಕಾರಣಿ ಪಿ.ರಾಜೀವ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಸ್ಥಳೀಯ ಜನತಾ ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಪಾಟೀಲ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಸಂಕೇಶ್ವರದ ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ಹಾಗೂ ಹಿರಿಯ ಸಾಹಿತಿಗಳಾದ ಡಾ. ಗುರುಪಾದ ಮರಿಗುದ್ದಿ ಗ್ರಂಥ ಪರಿಚಯಿಸಲಿದ್ದಾರೆ. ಅಥಣಿಯ ವಿಮೋಚನಾ ಸಂಸ್ಥೆಯ ಅಧ್ಯಕ್ಷರು ಶಿವಶರಣರಾದ ಬಿ.ಎಲ್. ಪಾಟೀಲ ಅಭಿನಂದನ ನುಡಿಗಳನ್ನಾಡಲಿದ್ದಾರೆ.ಡಾ.ಸಿ.ಬಿ.ಕುಲಿಗೋಡ,ಹಾಗೂ ಕಾಡಪ್ಪಣ್ಣ ಮಾಳಿ ಅವರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ.
ಅಪರಾಹ್ನ 2.30 ಕ್ಕೆ “ಗುರುವಂದನ” ಹಾಗೂ “ವೃಷಭಶ್ರೀ” ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆಯನ್ನು ಸ್ಥಳೀಯ ಗಣ್ಯ ನಾಗರೀಕರಾದ ಡಿ.ಸಿ. ಸದಲಗಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ ಸದಸ್ಯರು ಮಾನ್ಯ ಹನಮಂತ ನಿರಾಣಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಮುಖ್ಯ ಅತಿಥಿಗಳಾಗಿ ಅಗಮಿಸಲಿದ್ದಾರೆ. ಸ್ಥಳೀಯ ಖ್ಯಾತ ವೈದ್ಯರಾದ ಡಾ.ಎಲ್.ಎಸ್. ಜಂಬಗಿ, ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ರಾಮಣ್ಣ ಗಸ್ತಿ, ವೃಷಭೇಂದ್ರ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಆರ್ ಎಸ್ ಯಲಶೆಟ್ಟಿ, ಶರಣ ವಿಚಾರ ವಾಹಿನಿಯ ಅಧ್ಯಕ್ಷರಾದ ಶಿವಶರಣ ಅಯ್.ಆರ್. ಮಠಪತಿ ಗಣ್ಯರಾದ ,ಬಸಗೌಡ ಆಸಂಗಿ,ಹಾಗೂ ಪ್ರಾ.ಬಿ.ಎ. ಜಂಬಗಿ ಆಗಮಿಸಲಿದ್ದಾರೆ. ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ಗೌರವಾಧ್ಯಕ್ಷರು, ಹಾಗೂ ಜಮಖಂಡಿಯ ಉಪವಿಭಾಗಾಧಿಕಾರಿ ಡಾ.ಸಿದ್ದು ಹುಲ್ಲೋಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪತ್ನಿಯ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ಪಾಪಿ!

ಬೆಂಗಳೂರು : ತನ್ನನ್ನೇ ಸರ್ವಸ್ವ ಎಂದು ನಂಬಿಕೊಂಡು ಬಂದಿದ್ದ ಪತ್ನಿಗೆ, ಪಾಪಿಯೊಬ್ಬ ಅಮಾನವೀಯವಾಗಿ ನಡೆದುಕೊಂಡಿದ್ದಾನೆ.

ಆಯಾ ರಾಜ್ಯಗಳ ಭಾಷೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಕಪ್ರವೇ: ಮನವಿ

ಕೇಂದ್ರ ಸರ್ಕಾರ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳನ್ನು ಆಯಾ ರಾಜ್ಯದ ಮಾತೃ ಭಾಷೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾಪರ ವೇದಿಕೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿ ಮೋದಿಯವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವುಗೊಳಿಸುವಲ್ಲಿ ಸಚಿವ ಸಿ.ಸಿ.ಪಾಟೀಲ್ ಕೈವಾಡ ಆರೋಪ

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ(KSCST) ಪ್ರಕಟಿಸಿದ ಈ ವರ್ಷದ (2019-20) ಫಲಿತಾಂಶದಲ್ಲಿ, ನಗರದ ಪ್ರತಿಷ್ಠಿತ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದಿದ್ದಾರೆ.