ಉತ್ತರಪ್ರಭ ಸುದ್ದಿ
ನಿಡಗುಂದಿ:
ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ ಭಾದೆ ಈ ಭಾಗದಲ್ಲಿ ವ್ಯಾಪಕ ಕಂಡು ಬಂದಿದ್ದು ಈಚೆಗೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ, ಕೃಷಿ ಅಧಿಕಾರಿ ಎನ್.ಟಿ.ಗೌಡರ ತಾಲ್ಲೂಕಿನ ಗೊಳಸಂಗಿ ಹಾಗೂ ಬುದ್ನಿ ಗ್ರಾಮದ ಸೂರ್ಯಕಾಂತಿ ಮತ್ತು ಮಕ್ಕಜೋಳ ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದರು. ಸೂರ್ಯಕಾಂತಿ ಬೆಳೆಗಳಿಗೆ ಕೋರಿ ಹುಳುವಿನ ಕೀಟ ಭಾದೆ ಹೆಚ್ಚಾಗಿದ್ದು, ಈ ಕೀಟವು ಪತಂಗ ಜಾತಿಗೆ ಸೇರಿದ ಎಲೆಯ ಕೆಳಭಾಗದಲ್ಲಿ ಗುಂಪು ಗುಂಪುಗಳಾಗಿ ಸುಮಾರು 200-300 ಮೊಟ್ಟೆಗಳನ್ನು ಇಡುತ್ತದೆ ನಂತರ ಇದರಿಂದ ಬರುವ ಮರಿ ಹುಳುಗಳು ಸೂರ್ಯಕಾಂತಿಯ ಎಲೆಗಳನ್ನು ಸಂಪೂರ್ಣವಾಗಿ ನಾಶಮಾಡುತ್ತವೆ. ಮರಿಹುಳಗಳು ಎಲೆಯ ಕೆಳಭಾಗದಲ್ಲಿ ವಾಸಿಸುವರಿಂದ ಮೊದಲು ಕೀಟಭಾದೆಗೆ ಒಳಗಾದ ಎಲೆಗಳನ್ನು ಕಿತ್ತುಹಾಕಿ ಮರಿ ಹುಳಗಳನ್ನು ನಾಶಪಡಿಸಬೇಕು, ನಂತರ ಸೈಪರ ಮೃಥಿನ್ ಅಥವಾ ಅಲ್ಲಾ ಮೈನ್ ಹೆಸರಿನ ಯಾವುದಾದರೊಂದು ಕೀಟನಾಶಕವನ್ನು ಲೀಟರ್ ನೀರಿಗೆ 0.5 ಮಿಲಿಯಷ್ಟು ಮಿಶ್ರಣಮಾಡಿ ಎಲೆಯ ಕೆಳಭಾಗ ಒದ್ದೆಯಾಗುವ ಹಾಗೆ ಸಿಂಪಡಿಸುವ ಮೂಲಕ ಕೀಟಬಾಧೆ ನಿಯಂತ್ರಿಸಬಹುದು, ಮತ್ತು ಹೊಲದ ಸುತ್ತಲೂ ಹರಿತಗೆದು 4% ರ ಫೆನವಲರೇಟೆ ಪುಡಿಯನ್ನು ಹರಿಯಲ್ಲಿ ಹಾಕಬೇಕು ಎಂದು ರೈತರಿಗೆ ಸಲಹೆ ನೀಡಿದರು.

Leave a Reply

Your email address will not be published. Required fields are marked *

You May Also Like

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿರಹಟ್ಟಿ ಮಾಬುಸುಬಾನಿ ಉರುಸು ರದ್ದು

ಮಾಬುಸುಬಾನಿ ಉರುಸು ರದ್ದು ಪಟ್ಟಣದಲ್ಲಿ ಭಾವೈಕ್ಯತೆ ಸಂಕೇತವಾಗಿದ್ದ ಹಜರತ್ ಮೆಹಬೂಬ ಸುಬ್ಹಾನಿ(ರಹ) ದರ್ಗಾದ ಉರುಸು ಈ ಬಾರಿ ಕೊರೊನಾದಿಂದ ರದ್ದುಗೊಳಿಸಲಾಗಿದೆ. ಉರುಸು ನಿಮಿತ್ಯ ನವೆಂಬರ್ 25 ರಿಂದ 27ರವರೆಗೆ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮದಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಆದೇಶದ ಪ್ರಕಾರ ರದ್ದುಗೊಳಿಸಲಾಗಿದೆ.