ಉತ್ತರಪ್ರಭ ಸುದ್ದಿ
ನಿಡಗುಂದಿ:
ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ ಭಾದೆ ಈ ಭಾಗದಲ್ಲಿ ವ್ಯಾಪಕ ಕಂಡು ಬಂದಿದ್ದು ಈಚೆಗೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ, ಕೃಷಿ ಅಧಿಕಾರಿ ಎನ್.ಟಿ.ಗೌಡರ ತಾಲ್ಲೂಕಿನ ಗೊಳಸಂಗಿ ಹಾಗೂ ಬುದ್ನಿ ಗ್ರಾಮದ ಸೂರ್ಯಕಾಂತಿ ಮತ್ತು ಮಕ್ಕಜೋಳ ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದರು. ಸೂರ್ಯಕಾಂತಿ ಬೆಳೆಗಳಿಗೆ ಕೋರಿ ಹುಳುವಿನ ಕೀಟ ಭಾದೆ ಹೆಚ್ಚಾಗಿದ್ದು, ಈ ಕೀಟವು ಪತಂಗ ಜಾತಿಗೆ ಸೇರಿದ ಎಲೆಯ ಕೆಳಭಾಗದಲ್ಲಿ ಗುಂಪು ಗುಂಪುಗಳಾಗಿ ಸುಮಾರು 200-300 ಮೊಟ್ಟೆಗಳನ್ನು ಇಡುತ್ತದೆ ನಂತರ ಇದರಿಂದ ಬರುವ ಮರಿ ಹುಳುಗಳು ಸೂರ್ಯಕಾಂತಿಯ ಎಲೆಗಳನ್ನು ಸಂಪೂರ್ಣವಾಗಿ ನಾಶಮಾಡುತ್ತವೆ. ಮರಿಹುಳಗಳು ಎಲೆಯ ಕೆಳಭಾಗದಲ್ಲಿ ವಾಸಿಸುವರಿಂದ ಮೊದಲು ಕೀಟಭಾದೆಗೆ ಒಳಗಾದ ಎಲೆಗಳನ್ನು ಕಿತ್ತುಹಾಕಿ ಮರಿ ಹುಳಗಳನ್ನು ನಾಶಪಡಿಸಬೇಕು, ನಂತರ ಸೈಪರ ಮೃಥಿನ್ ಅಥವಾ ಅಲ್ಲಾ ಮೈನ್ ಹೆಸರಿನ ಯಾವುದಾದರೊಂದು ಕೀಟನಾಶಕವನ್ನು ಲೀಟರ್ ನೀರಿಗೆ 0.5 ಮಿಲಿಯಷ್ಟು ಮಿಶ್ರಣಮಾಡಿ ಎಲೆಯ ಕೆಳಭಾಗ ಒದ್ದೆಯಾಗುವ ಹಾಗೆ ಸಿಂಪಡಿಸುವ ಮೂಲಕ ಕೀಟಬಾಧೆ ನಿಯಂತ್ರಿಸಬಹುದು, ಮತ್ತು ಹೊಲದ ಸುತ್ತಲೂ ಹರಿತಗೆದು 4% ರ ಫೆನವಲರೇಟೆ ಪುಡಿಯನ್ನು ಹರಿಯಲ್ಲಿ ಹಾಕಬೇಕು ಎಂದು ರೈತರಿಗೆ ಸಲಹೆ ನೀಡಿದರು.

Leave a Reply

Your email address will not be published. Required fields are marked *

You May Also Like

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯೋದಂತೆ ಸರ್ಕಾರ ಬಿಲ್ ಕಟ್ಟಬೇಕಂತೆ!! ಇದು ಜನಪ್ರತಿನಿಧಿಗಳ ಕೊರೊನಾ ಕಥೆ!!

ಬೆಂಗಳೂರು : ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಕಷ್ಟಪಡುತ್ತಿವೆ. ಇದರ ಮಧ್ಯೆಯೇ ಸೋಂಕಿಗೆ ತುತ್ತಾಗಿ ಗುಣಮುಖರಾಗಿರುವ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರ ಹೊರೆಯೂ ಸರ್ಕಾರದ ಮೇಲೆ ಬಿದ್ದಿದೆ.

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಅಸುಂಡಿ ಬಾಲಕಿ ಕೊಲೆ ಪ್ರಕರಣ:24 ಗಂಟೆಯಾದರು ಇನ್ನೂ ಪತ್ತೆಯಾಗದ ಹಂತಕರು

ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.

ರಾಜ್ಯದಲ್ಲಿಂದು 5072 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5072 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾದಂತಾಗಿದೆ.