ಉತ್ತರಪ್ರಭ ಸುದ್ದಿ
ಆಲಮಟ್ಟಿ: ರಾಷ್ಟ್ರಧರ್ಮ ದೃಷ್ಟಾರ, ನೈಷ್ಟಿಕ ಬ್ರಮ್ಮಚಾರಿ, ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು ಐತಿಹಾಸಿಕ ದೇಶಭಕ್ತಿಯ ನಿನಾದ ಮೊಳಗಿದವು. ಯುವಜನತೆ ತಿರಂಗಾ ಕಲರವದಲ್ಲಿ ಮಿಂದೆದ್ದು ದೇಶಾಭಿಮಾನದ ವಿರಾಟ್ ರೂಪ ಪ್ರದಶಿ೯ಸಿದರು. ಜನಪದ ಸೊಗಡಿನ ಝೇಂಕಾರದ ಸದ್ದು ಮಾರ್ದನಿಸಿದವು. ಆಲಮಟ್ಟಿಯ ಹಡೇ೯ಕರ ಮಂಜಪ್ಪ ಸ್ಮಾರಕದ ಅಂಗಳದಲ್ಲಿ ಶುಕ್ರವಾರ ಕಂಡು ಬಂದ ವೈಭವಯುತ ದೃಶ್ಯಗಳು ನಿಜಕ್ಕೂ ಮೈಮನಗಳು ನಿಬ್ಬೆರಾಗುವಂತೆ ಬೆರಗುಗೊಳಿಸಿದವು. ದೇಶಭಕ್ತಿಯ ಸವಿರುಚಿಯಲ್ಲಿ ಅಪಾರ ಸಂಖ್ಯೆಯ ಯುವಜನ ಸಮೂಹ ಸೇರಿದಂತೆ ಅಸಂಖ್ಯಾತ ಜನತೆ ತೇಲುವಂತೆ ಮಾಡಿದವು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು 75 ನೇ ಸ್ವಾತಂತ್ರ್ಯ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸದೃಢ ಭಾರತಕ್ಕಾಗಿ ಆಲಮಟ್ಟಿಯಿಂದ ತಾಳಿಕೋಟಿವರೆಗೆ ಸಂಘಟಿಸಿರುವ 8 ದಿನದ ಯುವಜನ ಸಂಕಲ್ಪ ನಡಿಗೆ 75 ಕಿಮೀ ಉದ್ದದ ಪಾದಯಾತ್ರೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಈ ಅಭೂತಪೂರ್ವ ಸವಿಭಾವಗಳು ಮೂಡಿಬಂದವು. ಸ್ವಾತಂತ್ರ್ಯಕ್ಕಾಗಿ ಜೀವತೆತ್ತ ಮಹನೀಯರ ಸ್ಮರಣೆ ಯುವ ಮನಗಳಲ್ಲಿ ಹರಿದಾಡಿದವು. ಅವರ ತ್ಯಾಗದ ಕಥಾ ಹಂದರ ಯುವಕರ ಮೊಗದಲ್ಲಿ ನುಸುಳಿ ದೇಶಾಭಿಮಾನದ ಕಿಚ್ಚು ಹುಟ್ಟಿಸಿದವು.


ಸಾವಿರಾರು ಸಂಖ್ಯೆಯಲ್ಲಿ ಯುವಕ,ಯುವತಿಯರು ರಾಷ್ಟ್ರಧ್ವಜದ ವಿಶೇಷ ಉಡುಗೆಯಲ್ಲಿ ತ್ರಿವರ್ಣ ಧ್ವಜದ ಪೇಟಾ ತಲೆಗೆ ಸುತ್ತಿಕೊಂಡು ನಡಿಗೆಯಲ್ಲಿ ಭಾಗಿಯಾದರು. ರಾಷ್ಟ್ರ ನಾಯಕರ ಸ್ತಬ್ಧ ಚಿತ್ರಗಳು, ಕರಾವಳಿ ಭಾಗದ ಜನಾಕರ್ಷಕ ಕೌಂಶಾಳೆ ಸೇರಿದಂತೆ ವಿವಿಧ ಯಕ್ಷಗಾನಗಳ ನೃತ್ಯ, ದೇಶಾಭಿಮಾನದ ಗೀತರಾಗಗಳು ಗಮನ ಸೆಳೆದವು. ಮಂಜಪ್ಪನವರ ಪುತ್ಥಳಿಗೆ ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಶಾಲಾ,ಕಾಲೇಜು ಮಕ್ಕಳು ಮೊದಲು ದಿನದ ಆರಂಭ ನಡಿಗೆಯಲ್ಲಿ ಉತ್ಸಹದಿಂದ ಪಾಲ್ಗೊಂಡಿದ್ದರು. ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಉದ್ಯಮಿ ಭರತಗೌಡ ಪಾಟೀಲ, ಎಸ್.ವಿ.ವಿ.ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟಿ, ನಿಡಗುಂದಿ ಶ್ರೀ ರುದ್ರಮುನಿ ಶಿವಾಚಾರ್ಯ ಸಾಮೀಜಿ, ಮಾಜಿ ಸೈನಿಕರು, ಹಲ ಗಣ್ಯಾತೀತ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಜವಾಬ್ದಾರಿ ಮುಗಿಯಲ್ಲ

ಸರ್ಕಾರ ಅನೇಕ ಯೋಜನೆಗಳನ್ನು ಅದರಲ್ಲೂ ಮುಖ್ಯವಾಗಿ ನೀರಿಗಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಕೇವಲ ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಇಲಾಖೆಯ ಜವಾಬ್ದಾರಿ ಮುಗಿಯುವುದಿಲ್ಲ. ನೀರು ಸರಬರಾಜು ಆಗುತ್ತದೆಯೋ ಇಲ್ಲೋವೋ ಎನ್ನುವುದನ್ನು ಅಧಿಕಾರಿಗಳು ಮನದಟ್ಟ ಮಾಡಿಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಗುರಿಕಾರ ಅಧಿಕಾರಿಗಳಿಗೆ ತಾಕೀತು ಮಾಡಿದರು

ಶಿರಹಟ್ಟಿ ತಾಲೂಕಿನಲ್ಲಿ ಗಣರಾಜ್ಯೋತ್ಸವ ಆಚರಣೆ ಬಗ್ಗೆ ತಹಶೀಲ್ದಾರ ನೀಡಿದ ಮಾಹಿತಿ

ಶಿರಹಟ್ಟಿ: ಪ್ರಸ್ತುತ ವರ್ಷದಲ್ಲಿ ಕೊರೊನಾ ನಿಯಮಾನುಸಾರ ಸರಳವಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ ಯಲ್ಲಪ್ಪ…

ಹಿರೆಬಾವಿ ಪುಷ್ಕರಣೆಗೆ ಬೇಕಿದೆ ನಿರ್ವಹಣೆ

ಪವಿತ್ರ ಭಾವನೆಯಿಂದ ಕಾಣುವ ಪುಷ್ಕರಣೆಗಳೀಗ ನಿರ್ವಹಣೆ ಕೊರತೆಯಿಂದ ಕಸದ ತೊಟ್ಟಿಯಂತಾಗಿವೆ ಎನ್ನುವುದು ಸ್ಥಳೀಯರ ಆರೋಪ.

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…