ನಿಡಗುಂದಿ: ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಆಕಸ್ಮಿಕವಾಗಿ ಕಾರು ಹರಿದ ಪರಿಣಾಮ 8 ಕುರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಸಮೀಪದ ಅಬ್ಬಿಹಾಳ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಬುಧವಾರ ಸಂಜೆ ನಡೆದಿದೆ. ಬೇನಾಳ ಎನ್ ಎಚ್ ಗ್ರಾಮದ ಅಶೋಕ ಬೆಳ್ಳೆಪ್ಪ ದಿಂಡವಾರ ಅವರಿಗೆ ಸೇರಿದ ಈ 14 ಕುರಿಗಳ ಹಿಂಡು ಮೇಯಲು ಹೊಲಕ್ಕೆ ಹೋಗಿದ್ದವು. ಹೆದ್ದಾರಿ ದಾಟುವಾಗ ಏಕಾಏಕಿ ಈ ಘಟನೆ ಸಂಭವಿಸಿದೆ.
ಆರು ಕುರಿಗಳಿಗೆ ಗಂಭೀರ ಗಾಯವಾಗಿದ್ದು, ಅವು ಕೂಡಾ ಬದಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಮೊದಲಿಗೆ ಬೈಕ್ ಸವಾರನೊಬ್ಬ ಒಂದು ಕುರಿಗೆ ಡಿಕ್ಕಿ ಹೊಡೆಸಿದಾಗ, ಇನ್ನುಳಿದ ಕುರಿಗಳು ಬೆದರಿ ಏಕಾಏಕಿ ರಸ್ತೆಗೆ ಬಂದ ಕಾರಣ ರಭಸದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆಯಿತು ಎನ್ನಲಾಗಿದ ನಿಡಗುಂದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಕುರಿ ಅಭಿವೃದ್ದಿ ನಿಗಮದಿಂದ ಕುರಿ ಮಾಲೀಕರಿಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
.

Leave a Reply

Your email address will not be published. Required fields are marked *

You May Also Like

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ: ಪ್ರಧಾನಿ ಮೋದಿ

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ. ಇಂದು ಜಾಗತೀಕರಣದ ಜೊತೆಗೆ ಸ್ವಾವಲಂಬನೆ ಕೂಡ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಜೇಂದ್ರಗಡದಲ್ಲಿ ವಾರದ ಸಂತೆ ರದ್ದು!

ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರನ್ವಯ ಪಟ್ಟಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಲಾಗಿದೆ.