ಉತ್ತರಪ್ರಭ ಸುದ್ದಿ

ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿಯ ಕ್ರಿಕೆಟ್ ತಂಡ ಚಿನ್ನದ ಪದಕ ಗಳಿಸಿದೆ. ನಿಡಗುಂದಿಯ ಕ್ರಿಕೆಟ್ ತರಬೇತುದಾರ ಪವಾಡೆಪ್ಪ ಗುಂಡಿನಪಾಳ್ಯ ಅವರ ಮಾರ್ಗದರ್ಶನದಲ್ಲಿ ಈ ಕ್ರಿಕೆಟ್ ತಂಡ ಈ ಸಾಧನೆ ಮಾಡಿದೆ. ತಂಡದಲ್ಲಿ ನಿಡಗುಂದಿ ಪಟ್ಟಣದ ಯುವ ಪ್ರತಿಭೆಗಳಾದ ಶಿವಾನಂದ ಮಹಾದೇವಪ್ಪ ಗುಡಿಮನಿ, ಕಿರಣ ಮೋತಿಲಾಲ್ ಚವ್ಹಾಣ, ಸಂಪತ್ ಸಂಗಮೇಶ ಗೂಗಿಹಾಳ, ಪವನ ಕನಕಪ್ಪ ಪೂಜಾರಿ, ಪರಶುರಾಮ ಸುರೇಶ ಭಾಂಡವಳಕರ, ಖಲೀಲ್ ಬಾಬಾಜಾನ್ ಪೀರಜಾದೆ, ಅರವಿಂದ ಜವಾರಾಮ್ ಚೌಧರಿ, ಸುಮಿತ ಪರಶುರಾಮ ಕೇಳವಾಡಿ, ಸಮೀರ್ ಜಾವೀದ್ ಮನ್ನಿಕೇರಿ, ಅಕ್ಷಯಕುಮಾರ ಯಲಗೂರೇಶ, ಕಿರಣ ಚೌಧರಿ ಕ್ರಿಕೆಟ್ ತಂಡದಲ್ಲಿದ್ದರು. ಇವರೆಲ್ಲರ ಸಾಂಘಿಕ ಆಟದ ಪ್ರದರ್ಶನದಿಂದ ನಿಡಗುಂದಿ ಕ್ರಿಕೆಟ್ ತಂಡ ಪಂದ್ಯಾವಳಿಯಲ್ಲಿ ಮಿಂಚಿ ಪ್ರಶಸ್ತಿ ಪಡೆದಿದೆ.

Leave a Reply

Your email address will not be published. Required fields are marked *

You May Also Like

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಮೋದಿ ಮಾತು ನಿರಾಶದಾಯಕವಾಗಿವೆ

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಅತ್ಯಂತ ನಿರಾಶದಾಯಕ ಮಾತಾಗಿವೆ ಎಂದು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿರಹಟ್ಟಿ ಮಾಬುಸುಬಾನಿ ಉರುಸು ರದ್ದು

ಮಾಬುಸುಬಾನಿ ಉರುಸು ರದ್ದು ಪಟ್ಟಣದಲ್ಲಿ ಭಾವೈಕ್ಯತೆ ಸಂಕೇತವಾಗಿದ್ದ ಹಜರತ್ ಮೆಹಬೂಬ ಸುಬ್ಹಾನಿ(ರಹ) ದರ್ಗಾದ ಉರುಸು ಈ ಬಾರಿ ಕೊರೊನಾದಿಂದ ರದ್ದುಗೊಳಿಸಲಾಗಿದೆ. ಉರುಸು ನಿಮಿತ್ಯ ನವೆಂಬರ್ 25 ರಿಂದ 27ರವರೆಗೆ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮದಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಆದೇಶದ ಪ್ರಕಾರ ರದ್ದುಗೊಳಿಸಲಾಗಿದೆ.