ಕೃಷ್ಣಾ ನದಿಗೆ ಜಿಗಿದು ಯುವಕ ಆತ್ಮಹತ್ಯೆ !

ಉತ್ತರಪ್ರಭ
ಆಲಮಟ್ಟಿ:
ಸೇತುವೆ ಮೇಲಿಂದ ಕೃಷ್ಣಾ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿ ಅಮೂಲ್ಯ ಜೀವತೆತ್ತಿರುವ ಘಟನೆಯೊಂದು ಭಾನುವಾರ ಇಲ್ಲಿ ನಡೆದಿದೆ.
ಕುಡಿದ ಅಮಲಿನ ಮತ್ತಿನಲ್ಲಿ ಇತ ಕೃಷ್ಣಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನ್ನೆಲಾಗಿದೆ.
ಇಂಥ ದುಸ್ಸಾಹಸಕ್ಕೀಳಿದವನು ಬಾಗಲಕೋಟ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಇಲ್ಲಿಗೆ ಸಮೀಪದ ಸೀತಿಮನಿ ತಾಂಡಾದ ಯುವಕನೆಂದು ಹೇಳಲಾಗಿದೆ. ಆ ತಾಂಡಾ ನಿವಾಸಿ ಸುನೀಲ ಸೋಮಲ್ಲಪ್ಪ ಚವ್ಹಾಣ(24) ಎಂದು ಗುರುತಿಸಲಾಗಿದೆ.
ಮೃತನು ಸರಾಯಿ ಚಟಕ್ಕೆ ಅಂಟಿಕೊಂಡಿದ್ದ. ಆಮಲಿನ ದಾಸನಾಗಿ ಇತ್ತೀಚೆಗೆ ಅತೀ ಹೆಚ್ಚು ಮದ್ಯ ಸೇವನೆ ಮಾಡುತ್ತಿರುವದರಿಂದ ಅವರ ಕುಟುಂಬ ವರ್ಗದವರು ಕುಡಿತವನ್ನು ಬಿಡುವಂತೆ ಒತ್ತಾಯಿಸಿದ್ದಾರೆನ್ನಲಾಗಿದೆ. ಅದಕ್ಕೆ ಅತ ಒಪ್ಪಲಿಲ್ಲ. ಇದನ್ನೇ ಮಾನಸಿಕವಾಗಿ ಕೌಟುಂಬಿಕ ಕಲಹ ಮಾಡಿಕೊಂಡು ಆತ್ಮಹತ್ಯೆ ದಾರಿ ತುಳಿದಿದ್ದಾನೆ. ಹಳೆ ರಾಷ್ಟ್ರೀಯ 13 ಕೃಷ್ಣಾ ಸೇತುವೆಯ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನ ಶವ ದೊರೆತಿದ್ದು ನಿಯಮಾನುಸಾರ ಶವ ಪರೀಕ್ಷೆಯ ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬಾಗಲಕೋಟ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಅರಣ್ಯ ಹುತಾತ್ಮರ ದಿನಾಚರಣೆ”ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಗಳ ಪಾತ್ರ ಮಹತ್ವದ್ದು”

ಉತ್ತರಪ್ರಭ ಸುದ್ದಿಆಲಮಟ್ಟಿ: ಅರಣ್ಯ ಇಲಾಖೆಯ ಸಿಬ್ಬಂದಿ ಅರಣ್ಯ ಸಂರಕ್ಷಣೆಯ ಜತೆಗೆ ಅರಣ್ಯ ಬೆಳೆಸುವಲ್ಲಿಯೂ ಮಹತ್ವದ ಪಾತ್ರ…

ಲಿಂ.ತೋಂಟದ ಸಿದ್ದಲಿಂಗ ಶ್ರೀಗಳವರ “ಆಲಮಟ್ಟಿ ಪ್ರೇಮ ಕಾವ್ಯಭಾವ” ಅನನ್ಯ !!!

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿಆಲಮಟ್ಟಿ (ವಿಜಯಪುರ ಜಿಲ್ಲೆ) : ಮನದಾಳದಿಂದ ಹೊರಡುವ ನಿಷ್ಕಲ್ಮಶ,ನಿಸ್ವಾರ್ಥವುಳ್ಳ ಪ್ರೀತಿ…

ಆರೋಗ್ಯ ಬಲವರ್ಧನೆಗೆ ಆಟೋಟಗಳು ಸಹಕಾರಿ

ಉತ್ತರಪ್ರಭಕ್ರೀಡೆಗಳಿಗೆ ಸ್ಪೂರ್ತಿ ನೀಡಿ- ಬಿಇಒ ಸಂಗಮೇಶ ಪೂಜಾರಿವರದಿ: ಗುಲಾಬಚಂದ ಜಾಧವಆಲಮಟ್ಟಿ: ಬಲವರ್ಧನೆಗೆ ಕ್ರೀಡೆಗಳು ಮಹತ್ತರ ಪಾತ್ರವಹಿಸುತ್ತವೆ.…

ಗೇಮ್ಸ್ – ಗ್ರೌಂಡ್ ನಾಲೆಡ್ಜ್ ಮಕ್ಕಳಿಗೆ ಕೊಡಿ- ಎಂ.ವಿ.ಹಿರೇಮಠ

ಬಸವನ ಬಾಗೇವಾಡಿ : ಇಂದಿನ ಸ್ಪಧಾ೯ತ್ಮಕ ಯುಗದ ಆಟೋಟಗಳ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ದೈಹಿಕ…