ಕೃಷ್ಣಾ ನದಿಗೆ ಜಿಗಿದು ಯುವಕ ಆತ್ಮಹತ್ಯೆ !

ಉತ್ತರಪ್ರಭ
ಆಲಮಟ್ಟಿ:
ಸೇತುವೆ ಮೇಲಿಂದ ಕೃಷ್ಣಾ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿ ಅಮೂಲ್ಯ ಜೀವತೆತ್ತಿರುವ ಘಟನೆಯೊಂದು ಭಾನುವಾರ ಇಲ್ಲಿ ನಡೆದಿದೆ.
ಕುಡಿದ ಅಮಲಿನ ಮತ್ತಿನಲ್ಲಿ ಇತ ಕೃಷ್ಣಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನ್ನೆಲಾಗಿದೆ.
ಇಂಥ ದುಸ್ಸಾಹಸಕ್ಕೀಳಿದವನು ಬಾಗಲಕೋಟ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಇಲ್ಲಿಗೆ ಸಮೀಪದ ಸೀತಿಮನಿ ತಾಂಡಾದ ಯುವಕನೆಂದು ಹೇಳಲಾಗಿದೆ. ಆ ತಾಂಡಾ ನಿವಾಸಿ ಸುನೀಲ ಸೋಮಲ್ಲಪ್ಪ ಚವ್ಹಾಣ(24) ಎಂದು ಗುರುತಿಸಲಾಗಿದೆ.
ಮೃತನು ಸರಾಯಿ ಚಟಕ್ಕೆ ಅಂಟಿಕೊಂಡಿದ್ದ. ಆಮಲಿನ ದಾಸನಾಗಿ ಇತ್ತೀಚೆಗೆ ಅತೀ ಹೆಚ್ಚು ಮದ್ಯ ಸೇವನೆ ಮಾಡುತ್ತಿರುವದರಿಂದ ಅವರ ಕುಟುಂಬ ವರ್ಗದವರು ಕುಡಿತವನ್ನು ಬಿಡುವಂತೆ ಒತ್ತಾಯಿಸಿದ್ದಾರೆನ್ನಲಾಗಿದೆ. ಅದಕ್ಕೆ ಅತ ಒಪ್ಪಲಿಲ್ಲ. ಇದನ್ನೇ ಮಾನಸಿಕವಾಗಿ ಕೌಟುಂಬಿಕ ಕಲಹ ಮಾಡಿಕೊಂಡು ಆತ್ಮಹತ್ಯೆ ದಾರಿ ತುಳಿದಿದ್ದಾನೆ. ಹಳೆ ರಾಷ್ಟ್ರೀಯ 13 ಕೃಷ್ಣಾ ಸೇತುವೆಯ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನ ಶವ ದೊರೆತಿದ್ದು ನಿಯಮಾನುಸಾರ ಶವ ಪರೀಕ್ಷೆಯ ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬಾಗಲಕೋಟ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ತೋಂಟದ ಶ್ರೀ, ಹಡೇ೯ಕರ, ಹಳಕಟ್ಟಿ ಜಗದ ಯುಗ ಪುರುಷರು- ಪಟ್ಟಣಶೆಟ್ಟರ

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಶಾಂತ ಚಿತ್ತತೆ,ಬದ್ದತೆ ಖ್ಯಾತಿಯ ಕನ್ನಡದ ಕುಲದೇವರಾದ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳು,ಕರುನಾಡಿನ…

ಶೌಚದಲ್ಲಿ ಕಾಣದ ನೀರು ? ಪ್ರವಾಸಿಗರ ದಿಗಿಲು !!! “ಪ್ರಯಾಸ-ಪರದಾಟ-ಹೈರಾಣ-ಫಜೀತಿ”

ಆಲಮಟ್ಟಿ: ನಿಸರ್ಗ ಸಹಜ ಕ್ರಿಯೆಗೆ ಹೊತ್ತು ಗೊತ್ತಿಲ್ಲ. ಅದು ಹೇಳಿ ಕೇಳಿ ಬರದು. ಶೌಚಾಲಯಕ್ಕೆ ಕಾಲಿರಿಸುವ…

ಕತ್ತಲೆ ಸೀಳಿ ಬೆಳಕು ಮೂಡಿಸಿದ ಸ್ವರಾಜ್ಯ ಸೂರ್ಯ ಗಾಂಧಿ: ಡಾ. ಸವಿತಾ ದೇಸಾಯಿ

ನಿಡಗುಂದಿ : ಲೋಕಮಾನ್ಯ ತಿಲಕರು ತೀರಿದ ನಂತರ ಸ್ವಾತಂತ್ರ್ಯ ಸಂಗ್ರಾಮದ ಬಾನಂಗಳದಲ್ಲಿ ಕವಿದಿದ್ದ ಕತ್ತಲನ್ನು ಸತ್ಯ,…

ಏಡ್ಸ್ ರೋಗ ಹತ್ತಿಕ್ಕಲು ಜನಜಾಗೃತಿ ಹೆಚ್ಚಳ-ಬಾಬುರಾವ ತಳವಾರ

ಆಲಮಟ್ಟಿ: 2030 ರೊಳಗೆ ಭಾರತದಲ್ಲಿ ಮಹಾಮಾರಿ ಏಡ್ಸ್ ರೋಗದ ಹಾವಳಿ ಸಂಪೂರ್ಣವಾಗಿ ತಡೆಗಟ್ಟಬೇಕಿದೆ. ಈ ಮಾರಕ…