ಉತ್ತರಪ್ರಭ ಸುದ್ದಿ

ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ ಪ್ರಮಾಣ ಅಧಿಕಗೊಳ್ಳುತ್ತಿರುವುದಕ್ಕೆ ಮುಂಜಾಗ್ರತಾ ಕ್ರಮವಾಗಿ ಹೊರಹರಿವು ಹೆಚ್ಚಿಸಲಾಗಿದೆ. ಈ ಮುಂಚೆ ಒಂದು ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಇಂದು 1.25 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಸೋಮವಾರ ಸಂಜೆ ವೇಳೆಗೆ ನದಿಪಾತ್ರಕ್ಕೆ 1 ಲಕ್ಷ ಕ್ಯುಸೆಕ್ ಬಿಡಲಾಗುತ್ತಿದ್ದ ನೀರುಮಂಗಳವಾರ ಬೆಳಿಗ್ಗೆಯಿಂದ ನೀರು ಬಿಡುಗಡೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ನೇರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಮತ್ತು ರಾಜ್ಯದ ಕೃಷ್ಣಾ ಅಚ್ಚುಕಟ್ಟು ಭಾಗದಲ್ಲಿ ನಿರಂತರ ಮೇಘ ವೃಷ್ಟಿ ಆಗುತ್ತಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಒಳಹರಿವಿನ ರಭಸ ಜೋರಾಗಿದೆ. ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಲಾಗಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಎಚ್ಚರಿಸಲಾಗಿದೆ. ಮಂಗಳವಾರವೂ ಡಂಗೂರ ಸಾರಿ ಮುನ್ನೆಚ್ಚರಿಕೆ ವಹಿಸುವಂತೆ ಜನತೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

You May Also Like

ಬಿಂಕದಕಟ್ಟಿ ಮೃಗಾಲಯದಲ್ಲಿ ಧರ್ಮಾರ್ಜುನರ ಘರ್ಜನೆ

ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.

ಅಸಮರ್ಪಕ ಬಸ್ ಸೌಲಭ್ಯ: ವಿದ್ಯಾರ್ಥಿಗಳ ಪ್ರತಿಭಟನೆ

ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಸರಿಯಾದ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದು, ಸಮಪರ್ಕಕ ಸಾರಿಗೆ ಕಲ್ಪಿಸುವಂತೆ‌ ಒತ್ತಾಯಿಸಿ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಮುಂಜಾನೆ ಬಸ್ ಗಳನ್ನು ತಡೆದು ದಿಢೀರ್ ಪ್ರತಿಭಟನೆ ಕೈಗೊಂಡ ಘಟನೆ ನಡೆಯಿತು.

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.