ಉತ್ತರಪ್ರಭ ಸುದ್ದಿ

ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ ಪ್ರಮಾಣ ಅಧಿಕಗೊಳ್ಳುತ್ತಿರುವುದಕ್ಕೆ ಮುಂಜಾಗ್ರತಾ ಕ್ರಮವಾಗಿ ಹೊರಹರಿವು ಹೆಚ್ಚಿಸಲಾಗಿದೆ. ಈ ಮುಂಚೆ ಒಂದು ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಇಂದು 1.25 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಸೋಮವಾರ ಸಂಜೆ ವೇಳೆಗೆ ನದಿಪಾತ್ರಕ್ಕೆ 1 ಲಕ್ಷ ಕ್ಯುಸೆಕ್ ಬಿಡಲಾಗುತ್ತಿದ್ದ ನೀರುಮಂಗಳವಾರ ಬೆಳಿಗ್ಗೆಯಿಂದ ನೀರು ಬಿಡುಗಡೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ನೇರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಮತ್ತು ರಾಜ್ಯದ ಕೃಷ್ಣಾ ಅಚ್ಚುಕಟ್ಟು ಭಾಗದಲ್ಲಿ ನಿರಂತರ ಮೇಘ ವೃಷ್ಟಿ ಆಗುತ್ತಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಒಳಹರಿವಿನ ರಭಸ ಜೋರಾಗಿದೆ. ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಲಾಗಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಎಚ್ಚರಿಸಲಾಗಿದೆ. ಮಂಗಳವಾರವೂ ಡಂಗೂರ ಸಾರಿ ಮುನ್ನೆಚ್ಚರಿಕೆ ವಹಿಸುವಂತೆ ಜನತೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ದೃಢಪಟ್ಟಿವೆ‌. ಈ ಮೂಲಕ ಸೋಂಕಿತರ ಸಂಖ್ಯೆ 20…

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…

ಲಕ್ಷ್ಮೇಶ್ವರ: ಅಗಸ್ತ್ಯ ತೀರ್ಥ ಸ್ಥಳ ಅಭಿವೃದ್ಧಿಗೆ ಒತ್ತಾಯ

ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ರೋಣದಲ್ಲಿ ಪ್ರಾಣಿಗಳ ಹಸಿವು ನೀಗಿಸಿ ಮಾನವೀಯತೆ ಮೆರೆದ ಎಎಸ್ಐ ಎಚ್.ಎಮ್.ಸರ್ವಿ

ನಗರದ ಬಸ್ ನಿಲ್ದಾಣದ ಹತ್ತಿರ ಬೀಡು ಬಿಟ್ಟಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡುವ ಮೂಲಕ ಎಎಸ್ಐ ಒಬ್ಬರೂ ಮಾನವೀಯತೆ ಮೆರೆದ ಘಟನೆ ರೋಣದಲ್ಲಿ ನಡೆದಿದೆ.