ಉತ್ತರಪ್ರಭ ಸುದ್ದಿ

ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ ಪ್ರಮಾಣ ಅಧಿಕಗೊಳ್ಳುತ್ತಿರುವುದಕ್ಕೆ ಮುಂಜಾಗ್ರತಾ ಕ್ರಮವಾಗಿ ಹೊರಹರಿವು ಹೆಚ್ಚಿಸಲಾಗಿದೆ. ಈ ಮುಂಚೆ ಒಂದು ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಇಂದು 1.25 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಸೋಮವಾರ ಸಂಜೆ ವೇಳೆಗೆ ನದಿಪಾತ್ರಕ್ಕೆ 1 ಲಕ್ಷ ಕ್ಯುಸೆಕ್ ಬಿಡಲಾಗುತ್ತಿದ್ದ ನೀರುಮಂಗಳವಾರ ಬೆಳಿಗ್ಗೆಯಿಂದ ನೀರು ಬಿಡುಗಡೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ನೇರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಮತ್ತು ರಾಜ್ಯದ ಕೃಷ್ಣಾ ಅಚ್ಚುಕಟ್ಟು ಭಾಗದಲ್ಲಿ ನಿರಂತರ ಮೇಘ ವೃಷ್ಟಿ ಆಗುತ್ತಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಒಳಹರಿವಿನ ರಭಸ ಜೋರಾಗಿದೆ. ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಲಾಗಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಎಚ್ಚರಿಸಲಾಗಿದೆ. ಮಂಗಳವಾರವೂ ಡಂಗೂರ ಸಾರಿ ಮುನ್ನೆಚ್ಚರಿಕೆ ವಹಿಸುವಂತೆ ಜನತೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

You May Also Like

ಅಭಿಮಾನಿಗಳಲ್ಲಿ ಗೋಲ್ಡನ್ ಸ್ಟಾರ್ ಮನವಿ ಮಾಡಿದ್ದೇನು?

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಜು. 2ರಂದು ಗೋಲ್ಡನ್…

ಶುರುವಾದ ಚಳಿಗಾಲ – ದೆಹಲಿಯಲ್ಲಿ ಹೆಚ್ಚುತ್ತಿದೆ ಕೊರೊನಾ ಆತಂಕ!

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿದ್ದು, ಚಳಿಗಾಲದ ಸಂದರ್ಭದಲ್ಲಿ ಆತಂಕ ಮನೆ ಮಾಡುತ್ತಿದೆ.

24ರಂದು ನಗರ ಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ…

ಮಸ್ಕಿ: ತಾಲೂಕು ಆಡಳಿತ ಮೇಲೆ ಕ್ರಮ ಒತ್ತಾಯ

ಚನ್ನಬಸನ ಪತ್ತೆಗೆ ಹಿನ್ನಡೆಯಾಗಿರುವ ತಾಲೂಕ ಆಡಳಿತ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.