ಉತ್ತರಪ್ರಭ

ಗದಗ: ಒಂದು ತಿಂಗಳಿನಿಂದ ಗದುಗಿಗೆ ಜಿಲ್ಲಾಧಿಕಾರಿಗಳ ನೇಮಕಾತಿಯನ್ನು ಸರ್ಕಾರ ಹೋರಡಿಸಿದ್ದು ಈ ತಿಂಗಳಲ್ಲೇ ಮೂರನೇಯದಾಗಿ ಶಿವಮೊಗ್ಗ ಜಿಲ್ಲೆಯ ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ (ಐ.ಎ.ಎಸ್) ವೈಶಾಲಿ ಎಮ್.ಎಲ್ (KN 2013) ರನ್ನು ಇಂದು ಗದಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಸರ್ಕಾರ ಆದೇಶ ಹೋರಡಿಸಿದೆ.

ಇನ್ನು ಮೂರು ದಿನದಲ್ಲಿ ಕೇಂದ್ರ ಸರಕಾರದ ಆದೇಶದಂತೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಪ್ರತಿ ಮನೆ ಮನೆಗೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅದ್ದುರಿಯಾಗಿ ಸಂಭ್ರಮಿಸಲು ತಿಳಿಸಿದ್ದು, ಒಂದೆಡೆ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಚಿತ್ರದುರ್ಗ ಹಾಗೂ ಗದಗ ಇವೆರಡು ಜಿಲ್ಲೆಗೆ ಉಸ್ತುವಾರಿಯ ಜವಾಬ್ದಾರಿ ನೀಡಿದ್ದು. ಆ. 15ರಂದು ಚಿತ್ರದುರ್ಗದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದು, ಅಲ್ಲದೆ ಜಿಲ್ಲಾದ್ಯಂತ ವಿಪರಿತ ಮಳೆಯಿಂದಾಗಿ ರೈತನು ತನ್ನ ಜೀವನೋಪಾಯಕ್ಕೆ ನಂಬಿ ಬೆಳೆದ ಬೆಳೆ ನಾಶವಾಗಿದ್ದು ಮತ್ತು ವಾಸಿಸುವ ಮನೆಗಳು ಮಳೆಗೆ ಹಾನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಪರಿಶೀಲನೆ ನಡೇಸದ ಅಧಿಕಾರಿಗಳಿಗು ಯಾರು ಕೇಳುವರಿಲ್ಲದಂತಾಗಿದೆ. ಗದಗ ಜಿಲ್ಲೆಯು ಒಂತರಾ ತಾಯಿ ಇಲ್ಲದ ತಬ್ಬಲಿಯಂತಾಗಿದೆ.

👆ಜಿಲ್ಲೆಯ ಹಲವೆಡೆ ಬೆಳೆ ಹಾನಿಯಾಗಿರು ದೃಶ್ಯಗಳು

ನಮ್ಮ ಜಿಲ್ಲೆಗೆ ಏಕೆ ಸರ್ಕಾರ ಬೇಜವಾಬ್ದಾರಿ ತೋರುತ್ತಿದೆ ಎನ್ನುವದು ಜಿಲ್ಲೆಯ ಜನರಲ್ಲಿ ಯಕ್ಷ ಪ್ರಶ್ನೆಯಾಗಿದೆ. ಈಗಲಾದರು ನಮ್ಮ ಜಿಲ್ಲೆಯ ಸ್ಥಿತಿ ಗತಿ ನೋಡಿಕೊಳ್ಳಲು ಅಧಿಕೃತವಾಗಿ ಒಬ್ಬ ಉಸ್ತುವಾರಿ ಸಚಿವರನ್ನು ಹಾಗೂ ಜಿಲ್ಲಾಧಿಕಾರಿಯನ್ನು ಸರ್ಕಾರ ನೇಮಕ ಮಾಡಲೆಂದು ಇಲ್ಲಿಯ ಜನರ ಮಾತಾಗಿದೆ.

Leave a Reply

Your email address will not be published. Required fields are marked *

You May Also Like

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.

ಆನ್ಲೈನ್ ಸಹಾಯದಿಂದ ಯುವಕರಲ್ಲಿ ಜಾನಪದ ಆಸಕ್ತಿ ಮೂಡಿಸುತ್ತಿರುವ ಡಾ.ಬಾಲಾಜಿ

ಕನ್ನಡ ಜಾನಪದ ಯುವ ಬ್ರಿಗೇಡಿನ ಮೂಲಕ ಯುವ ಜನಾಂಗವನ್ನು ಎಚ್ಚರಿಸುವ ಹಾಗೂ ಅವರನ್ನು ಜಾನಪದ ಕಲೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲೂ ಆಪ್ ಸಹಾಯದಿಂದ ಯುವಕರನ್ನು ಸೇರಿಸಿ ಅವರಿಗೆ ಜಾನಪದ ಕಲೆಯ ಸೊಗಡು ಉಣ ಬಡಿಸುವ ಕಾರ್ಯ ಮಾಡುತ್ತಿದ್ದಾರೆ.

ಗಾಳಿ, ಗುಡುಗು ಸಹಿತ ಭಾರಿಮಳೆ

ಜೋರಾದ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿತು.

ದಿನಾಂಕ 27-12-2021 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ

ಉತ್ತರಪ್ರಭ ಸುದ್ದಿ ಗದಗ: ರಾಜ್ಯದಲ್ಲಿ 58 ಸ್ಥಳಿಯ ಸಂಸ್ಥೆಗಳಿಗೆ ಹಾಗೂ ಅವಧಿ ಮುಕ್ತಾಯವಾದ ಮತ್ತು ಖಾಲಿ…