ಉತ್ತರಪ್ರಭ

ಗದಗ: ಒಂದು ತಿಂಗಳಿನಿಂದ ಗದುಗಿಗೆ ಜಿಲ್ಲಾಧಿಕಾರಿಗಳ ನೇಮಕಾತಿಯನ್ನು ಸರ್ಕಾರ ಹೋರಡಿಸಿದ್ದು ಈ ತಿಂಗಳಲ್ಲೇ ಮೂರನೇಯದಾಗಿ ಶಿವಮೊಗ್ಗ ಜಿಲ್ಲೆಯ ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ (ಐ.ಎ.ಎಸ್) ವೈಶಾಲಿ ಎಮ್.ಎಲ್ (KN 2013) ರನ್ನು ಇಂದು ಗದಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಸರ್ಕಾರ ಆದೇಶ ಹೋರಡಿಸಿದೆ.

ಇನ್ನು ಮೂರು ದಿನದಲ್ಲಿ ಕೇಂದ್ರ ಸರಕಾರದ ಆದೇಶದಂತೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಪ್ರತಿ ಮನೆ ಮನೆಗೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅದ್ದುರಿಯಾಗಿ ಸಂಭ್ರಮಿಸಲು ತಿಳಿಸಿದ್ದು, ಒಂದೆಡೆ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಚಿತ್ರದುರ್ಗ ಹಾಗೂ ಗದಗ ಇವೆರಡು ಜಿಲ್ಲೆಗೆ ಉಸ್ತುವಾರಿಯ ಜವಾಬ್ದಾರಿ ನೀಡಿದ್ದು. ಆ. 15ರಂದು ಚಿತ್ರದುರ್ಗದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದು, ಅಲ್ಲದೆ ಜಿಲ್ಲಾದ್ಯಂತ ವಿಪರಿತ ಮಳೆಯಿಂದಾಗಿ ರೈತನು ತನ್ನ ಜೀವನೋಪಾಯಕ್ಕೆ ನಂಬಿ ಬೆಳೆದ ಬೆಳೆ ನಾಶವಾಗಿದ್ದು ಮತ್ತು ವಾಸಿಸುವ ಮನೆಗಳು ಮಳೆಗೆ ಹಾನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಪರಿಶೀಲನೆ ನಡೇಸದ ಅಧಿಕಾರಿಗಳಿಗು ಯಾರು ಕೇಳುವರಿಲ್ಲದಂತಾಗಿದೆ. ಗದಗ ಜಿಲ್ಲೆಯು ಒಂತರಾ ತಾಯಿ ಇಲ್ಲದ ತಬ್ಬಲಿಯಂತಾಗಿದೆ.

👆ಜಿಲ್ಲೆಯ ಹಲವೆಡೆ ಬೆಳೆ ಹಾನಿಯಾಗಿರು ದೃಶ್ಯಗಳು

ನಮ್ಮ ಜಿಲ್ಲೆಗೆ ಏಕೆ ಸರ್ಕಾರ ಬೇಜವಾಬ್ದಾರಿ ತೋರುತ್ತಿದೆ ಎನ್ನುವದು ಜಿಲ್ಲೆಯ ಜನರಲ್ಲಿ ಯಕ್ಷ ಪ್ರಶ್ನೆಯಾಗಿದೆ. ಈಗಲಾದರು ನಮ್ಮ ಜಿಲ್ಲೆಯ ಸ್ಥಿತಿ ಗತಿ ನೋಡಿಕೊಳ್ಳಲು ಅಧಿಕೃತವಾಗಿ ಒಬ್ಬ ಉಸ್ತುವಾರಿ ಸಚಿವರನ್ನು ಹಾಗೂ ಜಿಲ್ಲಾಧಿಕಾರಿಯನ್ನು ಸರ್ಕಾರ ನೇಮಕ ಮಾಡಲೆಂದು ಇಲ್ಲಿಯ ಜನರ ಮಾತಾಗಿದೆ.

Leave a Reply

Your email address will not be published. Required fields are marked *

You May Also Like

ಸಾಹಿತ್ಯ ಪರಿಷತ್ತು ಡಿಜಟಲಿಕರಣವಾಗಬೇಕು : ಚನ್ನೆಗೌಡ

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸಂಸ್ಥೆಯಾಗಿ ಬೆಳೆಯಬೇಕಾಗಿದೆ. ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಚುಣಾಯಿತನಾದರೆ ಸಾಹಿತ್ಯ ಪರಿಷತ್ತನ್ನು ಸಾರ್ವಜನಿಕರಿಗೆ ವಿಶ್ವವಿದ್ಯಾಲಯದಂತೆ ಬೆಳಕು ಚೆಲ್ಲುವ ಕೆಲಸವನ್ನು ಸಾಹಿತ್ಯ ಪರಿಷತ್ತಿನ ಮೂಲಕ ಮಾಡುವೆ ಎಂದು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ವಿ.ಸಿ. ಚನ್ನೇಗೌಡ ಹೇಳಿದರು.

ಗದಗ ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಪಾಟೀಲ್ ಅವಿರೋಧ ಆಯ್ಕೆ

ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ.…

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…