ಉತ್ತರಪ್ರಭ

ಗದಗ: ಒಂದು ತಿಂಗಳಿನಿಂದ ಗದುಗಿಗೆ ಜಿಲ್ಲಾಧಿಕಾರಿಗಳ ನೇಮಕಾತಿಯನ್ನು ಸರ್ಕಾರ ಹೋರಡಿಸಿದ್ದು ಈ ತಿಂಗಳಲ್ಲೇ ಮೂರನೇಯದಾಗಿ ಶಿವಮೊಗ್ಗ ಜಿಲ್ಲೆಯ ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ (ಐ.ಎ.ಎಸ್) ವೈಶಾಲಿ ಎಮ್.ಎಲ್ (KN 2013) ರನ್ನು ಇಂದು ಗದಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಸರ್ಕಾರ ಆದೇಶ ಹೋರಡಿಸಿದೆ.

ಇನ್ನು ಮೂರು ದಿನದಲ್ಲಿ ಕೇಂದ್ರ ಸರಕಾರದ ಆದೇಶದಂತೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಪ್ರತಿ ಮನೆ ಮನೆಗೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅದ್ದುರಿಯಾಗಿ ಸಂಭ್ರಮಿಸಲು ತಿಳಿಸಿದ್ದು, ಒಂದೆಡೆ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಚಿತ್ರದುರ್ಗ ಹಾಗೂ ಗದಗ ಇವೆರಡು ಜಿಲ್ಲೆಗೆ ಉಸ್ತುವಾರಿಯ ಜವಾಬ್ದಾರಿ ನೀಡಿದ್ದು. ಆ. 15ರಂದು ಚಿತ್ರದುರ್ಗದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದು, ಅಲ್ಲದೆ ಜಿಲ್ಲಾದ್ಯಂತ ವಿಪರಿತ ಮಳೆಯಿಂದಾಗಿ ರೈತನು ತನ್ನ ಜೀವನೋಪಾಯಕ್ಕೆ ನಂಬಿ ಬೆಳೆದ ಬೆಳೆ ನಾಶವಾಗಿದ್ದು ಮತ್ತು ವಾಸಿಸುವ ಮನೆಗಳು ಮಳೆಗೆ ಹಾನಿಯಾಗಿದ್ದು, ಸಮಯಕ್ಕೆ ಸರಿಯಾಗಿ ಪರಿಶೀಲನೆ ನಡೇಸದ ಅಧಿಕಾರಿಗಳಿಗು ಯಾರು ಕೇಳುವರಿಲ್ಲದಂತಾಗಿದೆ. ಗದಗ ಜಿಲ್ಲೆಯು ಒಂತರಾ ತಾಯಿ ಇಲ್ಲದ ತಬ್ಬಲಿಯಂತಾಗಿದೆ.

👆ಜಿಲ್ಲೆಯ ಹಲವೆಡೆ ಬೆಳೆ ಹಾನಿಯಾಗಿರು ದೃಶ್ಯಗಳು

ನಮ್ಮ ಜಿಲ್ಲೆಗೆ ಏಕೆ ಸರ್ಕಾರ ಬೇಜವಾಬ್ದಾರಿ ತೋರುತ್ತಿದೆ ಎನ್ನುವದು ಜಿಲ್ಲೆಯ ಜನರಲ್ಲಿ ಯಕ್ಷ ಪ್ರಶ್ನೆಯಾಗಿದೆ. ಈಗಲಾದರು ನಮ್ಮ ಜಿಲ್ಲೆಯ ಸ್ಥಿತಿ ಗತಿ ನೋಡಿಕೊಳ್ಳಲು ಅಧಿಕೃತವಾಗಿ ಒಬ್ಬ ಉಸ್ತುವಾರಿ ಸಚಿವರನ್ನು ಹಾಗೂ ಜಿಲ್ಲಾಧಿಕಾರಿಯನ್ನು ಸರ್ಕಾರ ನೇಮಕ ಮಾಡಲೆಂದು ಇಲ್ಲಿಯ ಜನರ ಮಾತಾಗಿದೆ.

Leave a Reply

Your email address will not be published. Required fields are marked *

You May Also Like

ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!

ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.

ನಗರ ಸಭೆ ಚುನಾವಣೆ: 11ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 11  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 11ನೇ ವಾರ್ಡನಲ್ಲಿ…

ರಂಗೇರಿದೆ ಹಳ್ಳಿ ಅಖಾಡ : ಕಣಕ್ಕೆ ಇಳಿದಿದ್ದಾರೆ 302 ಜನ

ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರುತ್ತಿದ್ದು, ಗೆಲುವಿಗಾಗಿ ಹಲವಾರು, ರೀತಿಯ ಹರಸಾಹಸ ಮಾಡುತ್ತಿದ್ದಾರೆ. ನರೇಗಲ್ ಹೋಬಳಿಯ ಹಳ್ಳಿಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯವಾಗಿತ್ತು. ಹೀಗಾಗಿ ಈಗಾಗಲೇ ಅಖಾಡ ಸಿದ್ಧವಾದಂತೆ ಕಾಣುತ್ತಿದೆ.

ಅಗಡಿ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

ನಗರದ ಪ್ರತಿಷ್ಠಿತ ಶ್ರೀಮತಿ.ಕಮಲಾ ಹಾಗೂ ಶ್ರೀ.ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಕಾಲೇಜು,ಲಕ್ಷ್ಮೇಶ್ವರದಲ್ಲಿ ಸಿಇಟಿ ಆಪ್ಷನ್ ಎಂಟ್ರಿ ಸಹಾಯ ಕೇಂದ್ರ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದಂತಹ ಡಾ.ಉದಯಕುಮಾರ ಹಂಪಣ್ಣವರ ತಿಳಿಸಿದ್ದಾರೆ.