ಆಲಮಟ್ಟಿ: ಈಗ ದೇಶಭಕ್ತಿಯ ಪ್ರೇಮಾಂಕುರದಲ್ಲಿ ಪುಟಾಣಿ ಚಿಣ್ಣರು ಸಹ ಮಿಂದೆದ್ದು ಉಲ್ಲಾಸದಿಂದ ಸಂಭ್ರಮಿಸುತ್ತಿದ್ದಾರೆ. 75 ನೇ ಸ್ವಾತಂತ್ರ್ಯ ಅಮೃತೋತ್ಸವ ಉತ್ಸಾಹ ಭರಿತವಾಗಿ ಮೈದೇಳಿ ಮನೆ ಮನಗಳಲ್ಲೂ ರಾರಾಜಿಸುತ್ತಿದೆ. ಎಲ್ಲೆಲ್ಲೂ ದೇಶ ಪ್ರೇಮ ಚಟುವಟಿಕೆಗಳ ಭಾವ ಅನಾವರಣಗೊಂಡು ಸಂಪನ್ನಗೊಳಿಸುತ್ತಿವೆ.

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಇಲ್ಲಿನ ಎಂ.ಎಚ್.ಎಂ.ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಪುಟ್ಟ ಮಕ್ಕಳು 75 ರ ಸಂಖ್ಯಾ ಆಕೃತಿಯಲ್ಲಿ ಕುಳಿತು ದೇಶಾಭಿಮಾನದ ಪ್ರೀತಿ ಮೆರೆದರು. ಆಕರ್ಷಣೀಯ ಈ ತಿರಂಗ ಉತ್ಸವದ ನೋಟ ಗಮನ ಸೆಳೆಯಿತು. ಮುಖ್ಯ ಗುರುಮಾತೆ ತನುಜಾ ಪೂಜಾರಿ, ಸಹ ಶಿಕ್ಷಕಿಯರಾದ ಸಿದ್ದಮ್ಮ ಅಂಗಡಿ,ಕವಿತಾ ಮರಡಿ,ಸರೋಜಾ ಕಬ್ಬೂರ,ಕಾಂಚನಾ ಕುಂದರಗಿ,ಶೈನಾಬಾನು ಬಾಗಲಕೋಟ, ಮಂಜುಳಾ ಸಂಗಾಪುರ,ಶಂಕ್ರಮ್ಮ ಗುಳೇದಗುಡ್ಡ, ಸುನೀತಾ ಮಹೇಂದ್ರಕರ ಮೊದಲಾದವರಿದ್ದರು.

ಅಮೃತ ಭೂವಿಕಾ…! 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಎಲ್ಲೆಲ್ಲೂ ಸಡಗರದಿಂದ ಮೊಳಗುತ್ತಿದೆ.ಆಲಮಟ್ಟಿ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆ ಶಿಕ್ಷಕ ರಾಜಕುಮಾರ ರಾಠೋಡ ಅವರ ಪುತ್ರಿ ಭೂವಿಕಾ ರಾಠೋಡ ಈ ಸವಿಘಳಿಗೆಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮಳ ವೇಷದಲ್ಲಿ ನಗು ಮೊಗದೊಂದಿಗೆ ಶನಿವಾರ ಕಾಣಿಸಿಕೊಂಡಿದ್ದು ಹೀಗೆ.


ಹಳಕಟ್ಟಿ ಶಾಲೆಯಲ್ಲಿ ಸಡಗರ : ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಮುಖ್ಯ ಶಿಕ್ಷಕ ಜಿ.ಎಂ.ಕೋಟ್ಯಾಳ ಶನಿವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳು,ಶಿಕ್ಷಕರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ಓದುವ ಬೆಳಕು : ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ

ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಕಾಂದಬರಿ…

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…

ಆಲಮಟ್ಟಿ : ಶಿವನ ಸನ್ನಿಧಿಯಲ್ಲಿ ಜನಸಾಗರ ವೈಭವ..!
ದೇವಲಾಪುರ ಬಸವ ಉದ್ಯಾನದಲ್ಲಿ ಬ್ರಹತ್ ಈಶ್ವರನ ಮೂತಿ೯ ವೀಕ್ಷಿಸಿದ ಭಕ್ತರು

ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಂದು ಸಂಪ್ರದಾಯದ ಅತ್ಯಂತ ಪವಿತ್ರ ಹಬ್ಬ ಮಹಾ ಶಿವರಾತ್ರಿ…