ಆಲಮಟ್ಟಿ: ಈಗ ದೇಶಭಕ್ತಿಯ ಪ್ರೇಮಾಂಕುರದಲ್ಲಿ ಪುಟಾಣಿ ಚಿಣ್ಣರು ಸಹ ಮಿಂದೆದ್ದು ಉಲ್ಲಾಸದಿಂದ ಸಂಭ್ರಮಿಸುತ್ತಿದ್ದಾರೆ. 75 ನೇ ಸ್ವಾತಂತ್ರ್ಯ ಅಮೃತೋತ್ಸವ ಉತ್ಸಾಹ ಭರಿತವಾಗಿ ಮೈದೇಳಿ ಮನೆ ಮನಗಳಲ್ಲೂ ರಾರಾಜಿಸುತ್ತಿದೆ. ಎಲ್ಲೆಲ್ಲೂ ದೇಶ ಪ್ರೇಮ ಚಟುವಟಿಕೆಗಳ ಭಾವ ಅನಾವರಣಗೊಂಡು ಸಂಪನ್ನಗೊಳಿಸುತ್ತಿವೆ.

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಇಲ್ಲಿನ ಎಂ.ಎಚ್.ಎಂ.ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಪುಟ್ಟ ಮಕ್ಕಳು 75 ರ ಸಂಖ್ಯಾ ಆಕೃತಿಯಲ್ಲಿ ಕುಳಿತು ದೇಶಾಭಿಮಾನದ ಪ್ರೀತಿ ಮೆರೆದರು. ಆಕರ್ಷಣೀಯ ಈ ತಿರಂಗ ಉತ್ಸವದ ನೋಟ ಗಮನ ಸೆಳೆಯಿತು. ಮುಖ್ಯ ಗುರುಮಾತೆ ತನುಜಾ ಪೂಜಾರಿ, ಸಹ ಶಿಕ್ಷಕಿಯರಾದ ಸಿದ್ದಮ್ಮ ಅಂಗಡಿ,ಕವಿತಾ ಮರಡಿ,ಸರೋಜಾ ಕಬ್ಬೂರ,ಕಾಂಚನಾ ಕುಂದರಗಿ,ಶೈನಾಬಾನು ಬಾಗಲಕೋಟ, ಮಂಜುಳಾ ಸಂಗಾಪುರ,ಶಂಕ್ರಮ್ಮ ಗುಳೇದಗುಡ್ಡ, ಸುನೀತಾ ಮಹೇಂದ್ರಕರ ಮೊದಲಾದವರಿದ್ದರು.

ಅಮೃತ ಭೂವಿಕಾ…! 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಎಲ್ಲೆಲ್ಲೂ ಸಡಗರದಿಂದ ಮೊಳಗುತ್ತಿದೆ.ಆಲಮಟ್ಟಿ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆ ಶಿಕ್ಷಕ ರಾಜಕುಮಾರ ರಾಠೋಡ ಅವರ ಪುತ್ರಿ ಭೂವಿಕಾ ರಾಠೋಡ ಈ ಸವಿಘಳಿಗೆಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮಳ ವೇಷದಲ್ಲಿ ನಗು ಮೊಗದೊಂದಿಗೆ ಶನಿವಾರ ಕಾಣಿಸಿಕೊಂಡಿದ್ದು ಹೀಗೆ.


ಹಳಕಟ್ಟಿ ಶಾಲೆಯಲ್ಲಿ ಸಡಗರ : ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಮುಖ್ಯ ಶಿಕ್ಷಕ ಜಿ.ಎಂ.ಕೋಟ್ಯಾಳ ಶನಿವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳು,ಶಿಕ್ಷಕರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಬುಡಮೇಲು ಸಮೇತ ಜನರೇ ಕಿತ್ತೆಸೆಯುತ್ತಾರೆ – ಸಿ.ಟಿ.ರವಿ ವಾಗ್ದಾಳಿ

ಕುಕ್ಕರ್ ಬಾಂಬರ್ ಗಳಿಗೆ ಬಿರಿಯಾನಿ ತಿನ್ನಿಸುವವರು ಅಧಿಕಾರಕ್ಕೆ ಬಂದರೆ ಭದ್ರತೆಗೆ ಅಪಾಯ !ನಿಡಗುಂದಿ: ರಾಜ್ಯದಲ್ಲಿ ಕುಕ್ಕರ್…

ಬೆಳೆ ರಕ್ಷಣೆಗೊಬ್ಬ ಆಪ್ತ: ನೇತಾಡುವ ಖಾಲಿ ಬಿಯರ್ ಬಾಟಲ್ಲು!

ನರೇಗಲ್ಲ: ಖಾಲಿ ಕ್ವಾಟರು ಬಾಟ್ಲಿ ಯಾವುದಕ್ಕೂ ಬರಂಗಿಲ್ಲ ಅನ್ನೋ ತರಹ ಯೋಗರಾಜ್ ಭಟ್ರು ಹಾಡು ಬರದಿದ್ರು.…

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…