ಆಲಮಟ್ಟಿ:
ಸಮೀಪದ ಬೇನಾಳ ಆರ್ ಎಸ್ ಗ್ರಾಮದ ವಾಕ್ ಸಿದ್ಧಿ ಪುರುಷ ರಾಮಣ್ಣ ಮುತ್ಯಾರ 69 ನೇ ಸ್ಮರಣೋತ್ಸವ ಇದೇ ಆ. 15 ಸೋಮವಾರ ನಡೆಯಲಿದೆ. ಆ.14 ರಾತ್ರಿಯಿಡಿ ವಾದಿ, ಪ್ರತಿವಾದಿ ಭಜನೆಗಳು ಜರುಗಲಿವೆ. ಆ. 15 ಬೆಳಿಗ್ಗೆ 8 ಕ್ಕೆ ರಾಮಣ್ಣ ಮುತ್ಯಾ ಗದ್ದುಗೆಗೆ ಅಭಿಷೇಕ, ಭಾವಚಿತ್ರದ ಮೆರವಣಿಗೆ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.


ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗೆ ಗ್ರಾಮೀಣ ಕಸರತ್ತು ಕ್ರೀಡೆಗಳಾದ ಸಂಗ್ರಾಣಿ ಕಲ್ಲು ಸಿಡಿ ಹೊಡೆಯುವ ಸ್ಪರ್ಧೆ, ತೆಕ್ಕೆ ಬಡಿದು ಚೀಲ ಎತ್ತವ ಸರ್ಧೆ, ಉಸುಕಿನ ಚೀಲ ಎತ್ತುವ ಸ್ಪರ್ಧೆ, ಸಂಗ್ರಾಣಿ ಕಲ್ಲು ವತಗಲ್ಲು ಮಾಡುವ ಸ್ಪರ್ಧೆಗಳು ಜರುಗಲಿವೆ.
ಎಲ್ಲಾ ಸ್ಪರ್ಧೆಗಳ ವಿಜೇತರಿಗೆ ಆಕರ್ಷಕ ಬಹುಮಾನವಿದೆ ಎಂದು ಜಾತ್ರಾ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಗೋವಿನ ಪ್ರತಿ ಅಂಗಳದಲ್ಲಿಯೂ ದೇವ- ದೇವತೆಗಳು ನೆಲೆಸಿವೆ- ಸತ್ಯಾರ್ಥತೀರ್ಥ ಶ್ರೀ

“ಯಲಗೂರ ಗೋಶಾಲೆ ಪ್ರೇರಕ ಶಕ್ತಿ ಸುಧಾಮೂತಿ೯ ಕರುನಾಡಿಗೆ ಸ್ಪೂರ್ತಿ” ಉತ್ತರಪ್ರಭ ಆಲಮಟ್ಟಿ: ಗೋವುಗಳನ್ನು ಕಸಾಯಿಕಾನೆಗೆ ಕಳುಹಿಸಲು…

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ಆಲಮಟ್ಟಿ: 75 ರ ಉತ್ಸವ ಚಿಣ್ಣರ ಸಂಭ್ರಮ..!

ಆಲಮಟ್ಟಿ: ಈಗ ದೇಶಭಕ್ತಿಯ ಪ್ರೇಮಾಂಕುರದಲ್ಲಿ ಪುಟಾಣಿ ಚಿಣ್ಣರು ಸಹ ಮಿಂದೆದ್ದು ಉಲ್ಲಾಸದಿಂದ ಸಂಭ್ರಮಿಸುತ್ತಿದ್ದಾರೆ. 75 ನೇ…