ಉತ್ತರಪ್ರಭ ಸುದ್ದಿ

ನರಗುಂದ: ತಾಲೂಕಿನ ಕಲ್ಲಾಪೂರ ಗ್ರಾಮದ ಪವಾಡ ಪುರುಷ ಬಸವಣ್ಣ ಜಾತ್ರೆಯ ನಿಮಿತ್ಯ ಪಾದಯಾತ್ರೆ ಮೂಲಕ ಜಾತ್ರೆಗೆ ತೆರಳುವ ಭಕ್ತರಿಗೆ ಶಿರೋಳ ಗ್ರಾಮದ cವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು. ಶ್ರಾವಣ ಮಾಸದ ಪ್ರಥಮ ಸೋಮವಾರದಿಂದ ಪ್ರತಿ ಸೋಮವಾರವೂ ಸುತ್ತ ಮುತ್ತಲಿನ ಹಳ್ಳಿಗಳಿಂದ ಅಪಾರ ಸಂಖ್ಯೆಯಲ್ಲಿ ಪಾದಯಾತ್ರೆ, ಎತ್ತು ಚಕ್ಕಡಿ ಮೂಲಕ ಭಕ್ತರು ಬಸವಣ್ಣನ ದರ್ಶನ ಪಡೆದು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಪ್ರತಿವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರ ಸಕಲ ವಾದ್ಯ ಮೇಳದ ಜೊತೆಗೆ ನೂರಾರು ಹಳ್ಳಿಗಳಿಂದ ಆಗಮಿಸುವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜಾತ್ರೆಯು ನಡೆಯುತ್ತದೆ. ಬೇಡಿದವರ ವರ ಪ್ರದಾಯಕ ಕಲ್ಲಾಪುರ ಬಸವಣ್ಣ. ಸರ್ಪ ಕಚ್ಚಿದಾಗ ಇಲ್ಲಿಯ ದರ್ಶನ ಪಡೆದು ತೀರ್ಥ ಸೇವಿಸಿದರೆ ಸರ್ಪದ ವಿಷ ದೇಹವನ್ನು ಆವರಿಸುವುದಿಲ್ಲ ಎನ್ನುವ ನಂಬಿಕೆ ಇದೆ, ಹಾಗೂ ಎತ್ತುಗಳನ್ನು ದೇಗುಲಕ್ಕೆ ಪ್ರದಕ್ಷಣೆ ಹಾಕಿಸಿ ಅಂಗಾರವನ್ನು ಎತ್ತುಗಳಿಗೆ ಹಚ್ಚಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಪ್ರತೀತಿ ಇದೆ.

Leave a Reply

Your email address will not be published. Required fields are marked *

You May Also Like

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ

ಮಹಿಳೆಯರ ಬಟ್ಟೆ ಕದಿಯುತ್ತಿದ್ದ ಕಳ್ಳನಿಗೆ ಥಳಿತ..!

ಹುಬ್ಬಳ್ಳಿ: ಚಿನ್ನಾಭರಣ ಕದ್ದಿರೋ ಕಳ್ಳರನ್ನು ನೋಡಿದ್ದೇವೆ. ಮನೆ ದರೋಡೆ ಮಾಡಿರೋದನ್ನು ನೋಡಿದ್ದೇವೆ. ಆದ್ರೆ ಮಹಿಳೆಯರ ಬಟ್ಟೆ…

ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 317 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7530…

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.