ಉತ್ತರಪ್ರಭ ಸುದ್ದಿ

ಗದಗ: ಮಾನ್ಯ ಶ್ರೀ ಪಿ ಜಿ ಆರ್ ಸಿಂದ್ಯಾ, ಮುಖ್ಯ ಆಯುಕ್ತರು ಭಾರತ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆ ಬೆಂಗಳೂರು ಇವರು ದಿನಾಂಕ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗದಲ್ಲಿ ನಡೆಯುತ್ತಿರುವಂತಹ ಸ್ಕೌಟ್ಸ್ ಅಂಡ್ ಗೈಡ್ಸ್ ಮೂಲ ತರಬೇತಿ ಶಿಬಿರಕ್ಕೆ ಭೇಟಿ ನೀಡಿ, ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಿ, ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ, ಈ ಸಂಸ್ಥೆಯ ಮೌಲ್ಯಗಳನ್ನ ಮಕ್ಕಳಿಗೆ ತಲುಪಿಸಿ ಆ ಮೂಲಕ ಮಾನವೀಯ ನೆಲೆಯಲ್ಲಿ ಸಮಾಜ ಹಾಗು ಪರಿಸರವನ್ನು ರಕ್ಷಿಸುವ ಮಹತ್ಕಾರ್ಯವನ್ನು ನಾವೆಲ್ಲ ಮಾಡೋಣ ಎಂದು ಕರೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸಬೇಕೆಂದು ಕರೆ ನೀಡಿದರು. ಈ ವರ್ಷ ಮೂಡಬಿದ್ರೆ ಯಲ್ಲಿ ನಡೆಯುವ ಜಾಗತಿಕ ಜಾಂಬೋರಿಯಲ್ಲಿ ಎಲ್ಲರೂ ಭಾಗವಹಿಸಲು ಹಾಗೂ ಯಶಸ್ವಿಯಾಗಿಸಲು ತಾವೆಲ್ಲರೂ ಸಂಸ್ಥೆಯೊಂದಿಗೆ ಕೈಜೋಡಿಸಿ ಎಂದರು. ಮಾನ್ಯ ಪ್ರಾಚಾರ್ಯರಾದ ಶ್ರೀ ಎಸ್ ಡಿ ಗಾಂಜಿ ಹಾಗೂ ಶ್ರೀ ಆರ್ ಎಸ್ ಬುರಡಿ, ಶ್ರೀ ಎಚ್ ಬಿ ರಡ್ಡೆರ, ಶ್ರೀ ಪೂಜಾರವರು ಹಾಗೂ ತರಬೇತಿದಾರರು, ಶಿಬಿರಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…

ಪತ್ನಿ ಮತ್ತು ಮಗುವನ್ನು ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ

ಉತ್ತರಪ್ರಭ ಸುದ್ದಿ ಗೋನಾಳ ಗ್ರಾಮದಲ್ಲಿ ಆರೋಪಿ ರಮೇಶ ದುಂಡಪ್ಪ ತೇಲಿ ಇವನು ಹೆಂಡತಿ ಮೇಲೆ ಸಂಶಯ…

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ – ತಾಲೂಕಾಡಳಿತದಿಂದ ಅಹವಾಲು ಸ್ವೀಕಾರ
ಗೋಳು ತೋಡಿಕೊಂಡ ಗೊಳಸಂಗಿ ಜನ.!

ಉತ್ತರಪ್ರಭ ಸುದ್ದಿಗೊಳಸಂಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ ಗೊಳಸಂಗಿ ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದಲ್ಲಿ…

ಕೆಂಪುರಾಜನಿಗೆ ಡಿಮ್ಯಾಂಡಪ್ಪೂ..ಡಿಮ್ಯಾಂಡು! ಬೆಳೆ ಇತ್ತು ಬೆಲೆ ಇರಲಿಲ್ಲ, ಈಗ ಬೆಳೆ ಇಲ್ಲ ಬೆಲೆ ಇದೆ…!

ಸುರೇಶ್ ಎಸ್.ಲಮಾಣಿ ಲಕ್ಷ್ಮೇಶ್ವರ: ಅತಿವೃಷ್ಟಿ ಮತ್ತು ಅನಾವೃಷ್ಟಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಜೀವನದುದ್ದಕ್ಕೂ ಕಂಬದ ಪೆಟ್ಟು…