ಉತ್ತರಪ್ರಭ ಸುದ್ದಿ

ಗದಗ: ಮಾನ್ಯ ಶ್ರೀ ಪಿ ಜಿ ಆರ್ ಸಿಂದ್ಯಾ, ಮುಖ್ಯ ಆಯುಕ್ತರು ಭಾರತ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆ ಬೆಂಗಳೂರು ಇವರು ದಿನಾಂಕ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗದಲ್ಲಿ ನಡೆಯುತ್ತಿರುವಂತಹ ಸ್ಕೌಟ್ಸ್ ಅಂಡ್ ಗೈಡ್ಸ್ ಮೂಲ ತರಬೇತಿ ಶಿಬಿರಕ್ಕೆ ಭೇಟಿ ನೀಡಿ, ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಿ, ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ, ಈ ಸಂಸ್ಥೆಯ ಮೌಲ್ಯಗಳನ್ನ ಮಕ್ಕಳಿಗೆ ತಲುಪಿಸಿ ಆ ಮೂಲಕ ಮಾನವೀಯ ನೆಲೆಯಲ್ಲಿ ಸಮಾಜ ಹಾಗು ಪರಿಸರವನ್ನು ರಕ್ಷಿಸುವ ಮಹತ್ಕಾರ್ಯವನ್ನು ನಾವೆಲ್ಲ ಮಾಡೋಣ ಎಂದು ಕರೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸಬೇಕೆಂದು ಕರೆ ನೀಡಿದರು. ಈ ವರ್ಷ ಮೂಡಬಿದ್ರೆ ಯಲ್ಲಿ ನಡೆಯುವ ಜಾಗತಿಕ ಜಾಂಬೋರಿಯಲ್ಲಿ ಎಲ್ಲರೂ ಭಾಗವಹಿಸಲು ಹಾಗೂ ಯಶಸ್ವಿಯಾಗಿಸಲು ತಾವೆಲ್ಲರೂ ಸಂಸ್ಥೆಯೊಂದಿಗೆ ಕೈಜೋಡಿಸಿ ಎಂದರು. ಮಾನ್ಯ ಪ್ರಾಚಾರ್ಯರಾದ ಶ್ರೀ ಎಸ್ ಡಿ ಗಾಂಜಿ ಹಾಗೂ ಶ್ರೀ ಆರ್ ಎಸ್ ಬುರಡಿ, ಶ್ರೀ ಎಚ್ ಬಿ ರಡ್ಡೆರ, ಶ್ರೀ ಪೂಜಾರವರು ಹಾಗೂ ತರಬೇತಿದಾರರು, ಶಿಬಿರಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಗೋಡೆ ಕುಸಿತ, ತಪ್ಪಿದ ಅನಾಹುತ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ. ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.

ರೈತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರದ ಕಣ್ಣು, ಹೃದಯ ಇಲ್ಲ : ಡಿಕೆಶಿ ಕಿಡಿ

ಧಾರವಾಡ : ರಾಜ್ಯ ಬಿಜೆಪಿ ಸರ್ಕಾರ ನೀಡಿದ ಪರಿಹಾರ ಇಲ್ಲಿಯವರೆಗೂ ರೈತರಿಗೆ ಸಿಕ್ಕೇಯಿಲ್ಲ ,ರೈತರಿಗೆ ತರಕಾರಿ ಮಾರಾಟ ಮಾಡಲು ಕೇವಲ ಎರಡೂ ಗಂಟೆ ಅವಕಾಶ ನೀಡುವ ಈ ಸರ್ಕಾರ ,ಆದರೆ ಮದ್ಯ ಮಾರಾಟ ಮಾಡಲು ಸಂಜೆ 4 ಗಂಟೆಯವರೆಗೂ ಅವಕಾಶ ನೀಡಿದೆ. ಈ ಸರ್ಕಾರಕ್ಕೆ ನಿಮಗೆ ಕಣ್ಣು,ಹೃದಯ ಎಂಬುದು ಇದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದರು .

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ – ಲಕ್ಷಾಂತರ ನಷ್ಟ!

ಬೆಂಗಳೂರು : ನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೂ. ಲಕ್ಷಾಂತರ ನಷ್ಟವಾಗಿದೆ.

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.