ಉತ್ತರಪ್ರಭ ಸುದ್ದಿ

ಗದಗ: ಮಾನ್ಯ ಶ್ರೀ ಪಿ ಜಿ ಆರ್ ಸಿಂದ್ಯಾ, ಮುಖ್ಯ ಆಯುಕ್ತರು ಭಾರತ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆ ಬೆಂಗಳೂರು ಇವರು ದಿನಾಂಕ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗದಲ್ಲಿ ನಡೆಯುತ್ತಿರುವಂತಹ ಸ್ಕೌಟ್ಸ್ ಅಂಡ್ ಗೈಡ್ಸ್ ಮೂಲ ತರಬೇತಿ ಶಿಬಿರಕ್ಕೆ ಭೇಟಿ ನೀಡಿ, ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಿ, ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ, ಈ ಸಂಸ್ಥೆಯ ಮೌಲ್ಯಗಳನ್ನ ಮಕ್ಕಳಿಗೆ ತಲುಪಿಸಿ ಆ ಮೂಲಕ ಮಾನವೀಯ ನೆಲೆಯಲ್ಲಿ ಸಮಾಜ ಹಾಗು ಪರಿಸರವನ್ನು ರಕ್ಷಿಸುವ ಮಹತ್ಕಾರ್ಯವನ್ನು ನಾವೆಲ್ಲ ಮಾಡೋಣ ಎಂದು ಕರೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸಬೇಕೆಂದು ಕರೆ ನೀಡಿದರು. ಈ ವರ್ಷ ಮೂಡಬಿದ್ರೆ ಯಲ್ಲಿ ನಡೆಯುವ ಜಾಗತಿಕ ಜಾಂಬೋರಿಯಲ್ಲಿ ಎಲ್ಲರೂ ಭಾಗವಹಿಸಲು ಹಾಗೂ ಯಶಸ್ವಿಯಾಗಿಸಲು ತಾವೆಲ್ಲರೂ ಸಂಸ್ಥೆಯೊಂದಿಗೆ ಕೈಜೋಡಿಸಿ ಎಂದರು. ಮಾನ್ಯ ಪ್ರಾಚಾರ್ಯರಾದ ಶ್ರೀ ಎಸ್ ಡಿ ಗಾಂಜಿ ಹಾಗೂ ಶ್ರೀ ಆರ್ ಎಸ್ ಬುರಡಿ, ಶ್ರೀ ಎಚ್ ಬಿ ರಡ್ಡೆರ, ಶ್ರೀ ಪೂಜಾರವರು ಹಾಗೂ ತರಬೇತಿದಾರರು, ಶಿಬಿರಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ನರೆಗಲ್ ಗಾರ್ಡನ್ ಕಥೆ: ಲಕ್ಷ ಖರ್ಚು ಮಾಡಿದರು ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ..?

ಗದಗ: ಜಿಲ್ಲೆಯ ನರೇಗಲ್ ಪಟ್ಟಣದ 17ನೇ ವಾರ್ಡ್‌ನಲ್ಲಿ ಶ್ರೀ ಅನ್ನದಾನೇಶ್ವರ ಕಾಲೆಜು ಪಕ್ಕದಲ್ಲಿ ನಾಲ್ಕು ವರ್ಷಗಳ…

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಗಡಿಬಿಡಿಯ ಲಾಕ್ ಡೌನ್ ಜಾರಿ: ಗಲಿಬಿಲಿಯಲ್ಲಿ ಉತ್ಪಾದನಾ ಫ್ಯಾಕ್ಟರಿ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಹಲವು ಜಿಲ್ಲೆ ಮತ್ತು ನಗರಗಳಲ್ಲಿ ದಿಢೀರ್ ಲಾಕ್ ಡೌನ್ ಹೇರಿದ್ದರಿಂದ ಕೈಗಾರಿಕಾ ಉತ್ಪಾದನಾ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.