ಉತ್ತರಪ್ರಭ ಸುದ್ದಿ

ಗದಗ: ಮಾನ್ಯ ಶ್ರೀ ಪಿ ಜಿ ಆರ್ ಸಿಂದ್ಯಾ, ಮುಖ್ಯ ಆಯುಕ್ತರು ಭಾರತ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆ ಬೆಂಗಳೂರು ಇವರು ದಿನಾಂಕ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗದಲ್ಲಿ ನಡೆಯುತ್ತಿರುವಂತಹ ಸ್ಕೌಟ್ಸ್ ಅಂಡ್ ಗೈಡ್ಸ್ ಮೂಲ ತರಬೇತಿ ಶಿಬಿರಕ್ಕೆ ಭೇಟಿ ನೀಡಿ, ಪ್ರತಿ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಿ, ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ, ಈ ಸಂಸ್ಥೆಯ ಮೌಲ್ಯಗಳನ್ನ ಮಕ್ಕಳಿಗೆ ತಲುಪಿಸಿ ಆ ಮೂಲಕ ಮಾನವೀಯ ನೆಲೆಯಲ್ಲಿ ಸಮಾಜ ಹಾಗು ಪರಿಸರವನ್ನು ರಕ್ಷಿಸುವ ಮಹತ್ಕಾರ್ಯವನ್ನು ನಾವೆಲ್ಲ ಮಾಡೋಣ ಎಂದು ಕರೆ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸಬೇಕೆಂದು ಕರೆ ನೀಡಿದರು. ಈ ವರ್ಷ ಮೂಡಬಿದ್ರೆ ಯಲ್ಲಿ ನಡೆಯುವ ಜಾಗತಿಕ ಜಾಂಬೋರಿಯಲ್ಲಿ ಎಲ್ಲರೂ ಭಾಗವಹಿಸಲು ಹಾಗೂ ಯಶಸ್ವಿಯಾಗಿಸಲು ತಾವೆಲ್ಲರೂ ಸಂಸ್ಥೆಯೊಂದಿಗೆ ಕೈಜೋಡಿಸಿ ಎಂದರು. ಮಾನ್ಯ ಪ್ರಾಚಾರ್ಯರಾದ ಶ್ರೀ ಎಸ್ ಡಿ ಗಾಂಜಿ ಹಾಗೂ ಶ್ರೀ ಆರ್ ಎಸ್ ಬುರಡಿ, ಶ್ರೀ ಎಚ್ ಬಿ ರಡ್ಡೆರ, ಶ್ರೀ ಪೂಜಾರವರು ಹಾಗೂ ತರಬೇತಿದಾರರು, ಶಿಬಿರಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯತಿಗಳು ಸಭೆ ಹಾಗೂ ಹಣಕಾಸಿನ ವ್ಯವಹಾರ ನಡೆಸುವಂತಿಲ್ಲ

ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ.