ಉತ್ತರಪ್ರಭ
ನಿಡಗುಂದಿ:
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87) ಶುಕ್ರವಾರ ರಾತ್ರಿ ಇಲ್ಲಿಗೆ ಸಮೀಪದ ಅವರ ಸ್ವಗ್ರಾಮ ಗೊಳಸಂಗಿಯಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಅನಾರೋಗ್ಯ ಪೀಡಿತರಾಗಿದ್ದರು‌.ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.


ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದರು. ಗೊಳಸಂಗಿ ಗ್ರಾಮದಲ್ಲಿ ನಾಲ್ಕು ದಶಕದ ಹಿಂದೆ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘವನ್ನು ಕಟ್ಟಿ ಶ್ರೀ ರಾಮಸ್ವಾಮಿ ಅಪ್ಪಣ್ಣಪ್ಪ ದಳವಾಯಿ ಪ್ರೌಢಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಆಗಿದ್ದರು. ಮುಸ್ಲಿಂ ಜನಾಂಗದಲ್ಲಿ ಹುಟ್ಟಿ ಬೆಳೆದಿದ್ದರೂ ಸಕಲ ಧರ್ಮಿಯರನ್ನು ಉದಾತ್ತ ಭಾವದಿಂದ ಪ್ರೀತಿಸುವ ಹೃದಯ ವೈಶಾಲಿಯಾಗಿದ್ದರು. ಪ್ರಗತಿಪರ ರೈತರಾಗಿಯೂ ಇತರರಿಗೆ ಮಾದರಿಯಾಗಿದ್ದರು.
ಜನಪದ ಸಾಹಿತಿಗಳಾಗಿದ್ದ ಇವರು ಅನೇಕ‌ ಜನಪದ ಪುಸ್ತಕಗಳನ್ನು ರಚಿಸಿದ್ದಾರೆ. ಹಲವಾರು ‌ಜನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ಕ್ಕೆ ಗೊಳಸಂಗಿ ಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.

ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಜನ್ಮದಿನಾಚರಣೆ ಮಾಡಿದ ಸರ್ಕಾರಿ ಅಧಿಕಾರಿ

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ಕೋವಿಡ್-೧೯ ಸಂದರ್ಭದಲ್ಲಿ ಸರಕಾರಿ ಆದೇಶ ಪ್ರಕಾರ ಜನ ಸಾಮಾನ್ಯರಾಗಲಿ ಹಾಗೂ…

ಮದುಮಗನ ತಡೆದ ಪೊಲೀಸರು : ಶುಭ ಕೋರಿ ಕಳುಹಿಸಿದರು

ರಾಜ್ಯದಲ್ಲಿ ಕೊರೋನಾದಿಂದ ಕರ್ಫ್ಯೂ ಜಾರಿಯಾಗಿದ್ದರಿಂದ ಸರಳವಾಗಿ ವಿವಾಹ ಮಾಡಿಕೊಳ್ಳಲು ತೆರಳುತ್ತಿದ್ದ ವರನನ್ನು ತಡೆದ ಪೊಲೀಸರು, ಮದುವೆ ಆಗುತ್ತಿರುವುದು ಖಚಿತ ಪಡಿಸಿಕೊಂಡ ಬಳಿಕ ಶುಭಕೋರಿ ಕಳುಹಿಸಿರುವ ಘಟನೆ ನಡೆದಿದೆ.

ಎಸಿಬಿ ಬಲೆಗೆ ಗದಗ ಕಾರ್ಮಿಕ ನಿರೀಕ್ಷಕಿ

ಕಾರ್ಮಿಕ ಇಲಾಖೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದ್ದು, ಕಾರ್ಮಿಕ ಇಲಾಖೆ ನಿರೀಕ್ಷಕಿ ಎಸಿಬಿ ಬಲೆಗೆ ಬಿದ್ದಿದ್ದಾರೆ.