ಉತ್ತರಪ್ರಭ
ನಿಡಗುಂದಿ:
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87) ಶುಕ್ರವಾರ ರಾತ್ರಿ ಇಲ್ಲಿಗೆ ಸಮೀಪದ ಅವರ ಸ್ವಗ್ರಾಮ ಗೊಳಸಂಗಿಯಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಅನಾರೋಗ್ಯ ಪೀಡಿತರಾಗಿದ್ದರು‌.ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.


ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದರು. ಗೊಳಸಂಗಿ ಗ್ರಾಮದಲ್ಲಿ ನಾಲ್ಕು ದಶಕದ ಹಿಂದೆ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘವನ್ನು ಕಟ್ಟಿ ಶ್ರೀ ರಾಮಸ್ವಾಮಿ ಅಪ್ಪಣ್ಣಪ್ಪ ದಳವಾಯಿ ಪ್ರೌಢಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಆಗಿದ್ದರು. ಮುಸ್ಲಿಂ ಜನಾಂಗದಲ್ಲಿ ಹುಟ್ಟಿ ಬೆಳೆದಿದ್ದರೂ ಸಕಲ ಧರ್ಮಿಯರನ್ನು ಉದಾತ್ತ ಭಾವದಿಂದ ಪ್ರೀತಿಸುವ ಹೃದಯ ವೈಶಾಲಿಯಾಗಿದ್ದರು. ಪ್ರಗತಿಪರ ರೈತರಾಗಿಯೂ ಇತರರಿಗೆ ಮಾದರಿಯಾಗಿದ್ದರು.
ಜನಪದ ಸಾಹಿತಿಗಳಾಗಿದ್ದ ಇವರು ಅನೇಕ‌ ಜನಪದ ಪುಸ್ತಕಗಳನ್ನು ರಚಿಸಿದ್ದಾರೆ. ಹಲವಾರು ‌ಜನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ಕ್ಕೆ ಗೊಳಸಂಗಿ ಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ಪೆಟ್ರೋಲ್ ತೆರಿಗೆ ಇಳಿಕೆಗೆ ನೀರಸ ಪ್ರತಿಕ್ರಿಯೆ ತೋರಿದ ಸಿಎಂ

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಜನರು ತತ್ತರಗೊಂಡಿದ್ದು, ದುಬಾರಿಯಾಗಿರುವುದರಿಂದ ಸೆಸ್ ಇಳಿಕೆ ಮಾಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಆದರೆ, ಬಹುತೇಕ ರಾಜ್ಯಗಳಿಂದ ಸೆಸ್ ಇಳಿಸಲು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.

ಕೊರೊನಾ ವಿಚಾರ : ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ…