ಉತ್ತರಪ್ರಭ
ನಿಡಗುಂದಿ:
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87) ಶುಕ್ರವಾರ ರಾತ್ರಿ ಇಲ್ಲಿಗೆ ಸಮೀಪದ ಅವರ ಸ್ವಗ್ರಾಮ ಗೊಳಸಂಗಿಯಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಅನಾರೋಗ್ಯ ಪೀಡಿತರಾಗಿದ್ದರು‌.ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.


ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದರು. ಗೊಳಸಂಗಿ ಗ್ರಾಮದಲ್ಲಿ ನಾಲ್ಕು ದಶಕದ ಹಿಂದೆ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘವನ್ನು ಕಟ್ಟಿ ಶ್ರೀ ರಾಮಸ್ವಾಮಿ ಅಪ್ಪಣ್ಣಪ್ಪ ದಳವಾಯಿ ಪ್ರೌಢಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಆಗಿದ್ದರು. ಮುಸ್ಲಿಂ ಜನಾಂಗದಲ್ಲಿ ಹುಟ್ಟಿ ಬೆಳೆದಿದ್ದರೂ ಸಕಲ ಧರ್ಮಿಯರನ್ನು ಉದಾತ್ತ ಭಾವದಿಂದ ಪ್ರೀತಿಸುವ ಹೃದಯ ವೈಶಾಲಿಯಾಗಿದ್ದರು. ಪ್ರಗತಿಪರ ರೈತರಾಗಿಯೂ ಇತರರಿಗೆ ಮಾದರಿಯಾಗಿದ್ದರು.
ಜನಪದ ಸಾಹಿತಿಗಳಾಗಿದ್ದ ಇವರು ಅನೇಕ‌ ಜನಪದ ಪುಸ್ತಕಗಳನ್ನು ರಚಿಸಿದ್ದಾರೆ. ಹಲವಾರು ‌ಜನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ಕ್ಕೆ ಗೊಳಸಂಗಿ ಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಪಾಸಿಟಿವ್ – ಜೆಡಿಎಸ್ ನಾಯಕನ ಹೈಡ್ರಾಮಾ!

ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ…

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ವಿಕೆಂಡ್ ಕರ್ಪ್ಯೂಗೆ ವಾಣಿಜ್ಯ ನಗರಿ ಸ್ಥಬ್ಧ

ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ರಾಜ್ಯದಲ್ಲಿಂದು 5199 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5199 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 96141 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು