ಉತ್ತರಪ್ರಭ
ನಿಡಗುಂದಿ:
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87) ಶುಕ್ರವಾರ ರಾತ್ರಿ ಇಲ್ಲಿಗೆ ಸಮೀಪದ ಅವರ ಸ್ವಗ್ರಾಮ ಗೊಳಸಂಗಿಯಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಅನಾರೋಗ್ಯ ಪೀಡಿತರಾಗಿದ್ದರು‌.ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.


ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದರು. ಗೊಳಸಂಗಿ ಗ್ರಾಮದಲ್ಲಿ ನಾಲ್ಕು ದಶಕದ ಹಿಂದೆ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘವನ್ನು ಕಟ್ಟಿ ಶ್ರೀ ರಾಮಸ್ವಾಮಿ ಅಪ್ಪಣ್ಣಪ್ಪ ದಳವಾಯಿ ಪ್ರೌಢಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಆಗಿದ್ದರು. ಮುಸ್ಲಿಂ ಜನಾಂಗದಲ್ಲಿ ಹುಟ್ಟಿ ಬೆಳೆದಿದ್ದರೂ ಸಕಲ ಧರ್ಮಿಯರನ್ನು ಉದಾತ್ತ ಭಾವದಿಂದ ಪ್ರೀತಿಸುವ ಹೃದಯ ವೈಶಾಲಿಯಾಗಿದ್ದರು. ಪ್ರಗತಿಪರ ರೈತರಾಗಿಯೂ ಇತರರಿಗೆ ಮಾದರಿಯಾಗಿದ್ದರು.
ಜನಪದ ಸಾಹಿತಿಗಳಾಗಿದ್ದ ಇವರು ಅನೇಕ‌ ಜನಪದ ಪುಸ್ತಕಗಳನ್ನು ರಚಿಸಿದ್ದಾರೆ. ಹಲವಾರು ‌ಜನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ಕ್ಕೆ ಗೊಳಸಂಗಿ ಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಶಾಲೆಗಳಿಗೆ ತಹಶಿಲ್ದಾರ ಸತೀಶ್ ಕೂಡಲಗಿ ಭೇಟಿ- ಕಾನೂನು ಸುವ್ಯವಸ್ಥೆ ಪರಿಶೀಲನೆ ಖುಷಿಯಿಂದ ಶಾಲೆಗೆ ಮರಳಿದ ಮಕ್ಕಳು

ಚಿತ್ರ ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಜಾಬ್- ಕೇಸರಿ ಜಟಾಪಟಿ ವಿವಾದದಿಂದ ಆತಂಕ ಸೃಷ್ಟಿಯಾಗಿ…

ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ಅಖಂಡ ಕರ್ನಾಟಕ ಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಗಜೇಂದ್ರಗಡ ಹಾಗೂ ರೋಣ ತಾಲೂಕಾ ಗೊಲ್ಲ ಸಮಾಜ ಬಾಂಧವರು ಪಟ್ಟಣದ ತಹಶೀಲ್ದಾರ ಮೂಲಕ ಸೋಮವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.