ಉತ್ತರಪ್ರಭ
ನಿಡಗುಂದಿ:
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87) ಶುಕ್ರವಾರ ರಾತ್ರಿ ಇಲ್ಲಿಗೆ ಸಮೀಪದ ಅವರ ಸ್ವಗ್ರಾಮ ಗೊಳಸಂಗಿಯಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಅನಾರೋಗ್ಯ ಪೀಡಿತರಾಗಿದ್ದರು‌.ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.


ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದರು. ಗೊಳಸಂಗಿ ಗ್ರಾಮದಲ್ಲಿ ನಾಲ್ಕು ದಶಕದ ಹಿಂದೆ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘವನ್ನು ಕಟ್ಟಿ ಶ್ರೀ ರಾಮಸ್ವಾಮಿ ಅಪ್ಪಣ್ಣಪ್ಪ ದಳವಾಯಿ ಪ್ರೌಢಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಆಗಿದ್ದರು. ಮುಸ್ಲಿಂ ಜನಾಂಗದಲ್ಲಿ ಹುಟ್ಟಿ ಬೆಳೆದಿದ್ದರೂ ಸಕಲ ಧರ್ಮಿಯರನ್ನು ಉದಾತ್ತ ಭಾವದಿಂದ ಪ್ರೀತಿಸುವ ಹೃದಯ ವೈಶಾಲಿಯಾಗಿದ್ದರು. ಪ್ರಗತಿಪರ ರೈತರಾಗಿಯೂ ಇತರರಿಗೆ ಮಾದರಿಯಾಗಿದ್ದರು.
ಜನಪದ ಸಾಹಿತಿಗಳಾಗಿದ್ದ ಇವರು ಅನೇಕ‌ ಜನಪದ ಪುಸ್ತಕಗಳನ್ನು ರಚಿಸಿದ್ದಾರೆ. ಹಲವಾರು ‌ಜನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ಕ್ಕೆ ಗೊಳಸಂಗಿ ಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ…

ವಾರದಲ್ಲಿ ಸಮಸ್ಯೆ ಬಗೆಹರಿಸಲು ಕರವೆ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಶನಿವಾರ ಹೆಬ್ಬಾಳ ಗ್ರಾಪಂ ಎದುರು ಪ್ರತಿಭಟನೆ ನಡೆಸಲಾಯಿತು.

ಪಿವರ್ಸ್ ಹಾಕದೆ ಕಾಮಗಾರಿ ಪೂರ್ಣ: ಲಕ್ಷ್ಮೇಶ್ವರದಲ್ಲಿ ಅಂಬೇಡ್ಕರ್ ನಗರ ಕಾಮಗಾರಿ ಮುಗಿದು ಐದು ತಿಂಗಳಾತು

ಕಾಂಕ್ರೀಟ್ ರಸ್ತೆ ಇಲ್ಲದೇ ಸಂಚಾರಕ್ಕೆ ಸಂಚಾಕಾರ ಬಂದಿದೆ ಎಂದು ಪಟ್ಟಣದ ಜನರು ಪಟ್ಟು ಹಿಡಿದ ಪರಿಣಾಮ ಕಾಂಕ್ರೀಟ್ ರಸ್ತೆಯೇನೋ ನಿರ್ಮಾಣ ಮಾಡಿದರು. ಆದರೆ ಕಾಮಗಾರಿ ಕಾಟಾಚಾರಕ್ಕೆ ಮಾಡಿದರಾ ಎನ್ನುವ ಪ್ರಶ್ನೆ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಉದ್ಭವವಾಗಿದೆ.