ಉತ್ತರಪ್ರಭ ಸುದ್ದಿ

ಗದಗ: ಪ್ರಧಾನ ಮಂತ್ರಿ ಕೃಷಿ ಸನ್ಮಾನ ನಿಧಿ ಯೋಜನೆಯಡಿ ಮುಂದಿನ ಕಂತುಗಳನ್ನು ರೈತರ ಆರ್ಥಿಕ ನೆರವಿಗಾಗಿ ರೈತ ಬಾಂಧವರು ಇ- ಕೆವೈಸಿ ಮಾಡಿಸಲು ಸೆಪ್ಟೆಂಬರ್ 7 ರ ವರೆಗೆ ವಿಸ್ತರಿಸಿ ಅಂತಿಮ ಗಡುವು ನೀಡಲಾಗಿದೆ. ಸೆಪ್ಟೆಂಬರ್ 7 ರ ಒಳಗಾಗಿ ಇ – ಕೆವೈಸಿ ಮಾಡಿಸಿಕೊಂಡು ರೈತರಿಗೆ ಮಾತ್ರ ಸೆಪ್ಟೆಂಬರ್ 15 ರಂದು ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ಈ ದಿನಾಂಕದೋಳಗೆ ಎಲ್ಲಾ ರೈತ ಬಾಂಧವರು ಕೂಡಲೇ ಇ – ಕೆವೈಸಿಯಲ್ಲಿ ರೈತರು ತಮ್ಮ ಆಧಾರ ಸಂಖ್ಯೆ ಯೊಂದಿಗೆ ಜೋಡಣೆ ಯಾಗಿರುವ ಮೋಬೈಲ್ ಸಂಖ್ಯೆಯನ್ನು ದಾಖಲಿಸಿ ಒಟಿಪಿ ಮುಖಾಂತರ ಇ- ಕೆವೈಸಿ ಮಾಡಿಸಬಹುದು. ಹಾಗೂ ತಮ್ಮ ಹತ್ತಿರ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ  ಇ- ಕೆವೈಸಿ ಮಾಡಿಸಿಕೋಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಗದಗ ಬೆಟಗೇರಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೀರಣ್ಣ ಗಡದ ರೈತ ಬಾಂಧವರಲ್ಲಿ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟಿ ಜಸ್ಲೀನ್ ಅವತಾರಕ್ಕೆ ನೆಟ್ಟಿಗರು ಶಾಕ್!

ಸೆಲೆಬ್ರಟಿಗಳಿಗೆ ಅದೆಂತೆಂಥಾ ಹುಚ್ಚಿರುತ್ತೆ ಅಂತ ಊಹಿಸೋಕು ಆಗಲ್ಲ. ಪ್ರಚಾರಕ್ಕಾಗಿ ಎಂತೆಂಥ ಚಿತ್ರವಿಚಿತ್ರ ಅವತಾರ ತಾಳುತ್ತಾರೆ ಅಂತ ಕಲ್ಪನೆಗೂ ಅಸಾಧ್ಯ. ಇಂತಹ ಪ್ರಚಾರದ ಗೀಳಿಗೆ ಬಿದ್ದ ನಟಿಯೊಬ್ಬರು ಇದೀಗ ನೆಟ್ಟಿಗರಿಗೆ ಶಾಕ್ ಕೊಟ್ಟಿದ್ದಾರೆ.

ಚೀಟಿ ಎತ್ತುವ ಮೂಲಕ ಹುಡುಗನೊಂದಿಗೆ ಮದುವೆ

ನಾಲ್ವರು ಯುವಕರ ಜೊತೆ ಓಡಿಹೋಗಿದ್ದ ಹುಡುಗಿಯೊಬ್ಬಳು ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು ಲಾಟರಿ ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಮದುವೆ ಮಾಡಿಸಿದ್ದಾರೆ.

ಗದಗ ನಗರದಲ್ಲಿ ಕ್ಷೌರದ ಅಂಗಡಿಗಳು ಬಂದ್‌ಗೆ ನಿರ್ಧಾರ

ಸವಿತಾ ಸಮಾಜ ಶ್ರೀ ಗದ್ವಾಲ್ ಜಮಲಮ್ಮ ದೇವಿ ದೇವಸ್ಥಾನ ಟ್ರಸ್ಟ್ ಕಮೀಟಿಯ ವತಿಯಿಂದ ಗದಗ-ಬೆಟಗೇರಿಯಲ್ಲಿ ಮಾ.9 ರಂದು ಮಂಗಳವಾರ ಜರುಗಲಿರುವ ಗದ್ವಾಲ್ ಜಮಲಮ್ಮ ದೇವಿ ದೇವಸ್ಥಾನದ 14ನೇ ವಾರ್ಷಿಕೋತ್ಸವ ಕಾರ್ಯಕ್ರಮದ ನಿಮಿತ್ಯ ಪೂರ್ವಭಾವಿ ಸಭೆಯು ಟ್ರಸ್ಟ್ ಕಮೀಟಿ ಅಧ್ಯಕ್ಷ ಕೃಷ್ಣಾ ಎಚ್. ಹಡಪದ ಅಧ್ಯಕ್ಷತೆಯಲ್ಲಿ ಗದಗ-ಬೆಟಗೇರಿ ಸವಿತಾ ಸಮಾಜದ ಮೂರು ದೈವದ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರು ಮತ್ತು ಸಮಾಜದ ಹಿರಿಯರ ಉಪಸ್ಥಿತಿಯಲ್ಲಿ ಜರುಗಿತು.