ಉತ್ತರಪ್ರಭ ಸುದ್ದಿ

ಗದಗ: ಪ್ರಧಾನ ಮಂತ್ರಿ ಕೃಷಿ ಸನ್ಮಾನ ನಿಧಿ ಯೋಜನೆಯಡಿ ಮುಂದಿನ ಕಂತುಗಳನ್ನು ರೈತರ ಆರ್ಥಿಕ ನೆರವಿಗಾಗಿ ರೈತ ಬಾಂಧವರು ಇ- ಕೆವೈಸಿ ಮಾಡಿಸಲು ಸೆಪ್ಟೆಂಬರ್ 7 ರ ವರೆಗೆ ವಿಸ್ತರಿಸಿ ಅಂತಿಮ ಗಡುವು ನೀಡಲಾಗಿದೆ. ಸೆಪ್ಟೆಂಬರ್ 7 ರ ಒಳಗಾಗಿ ಇ – ಕೆವೈಸಿ ಮಾಡಿಸಿಕೊಂಡು ರೈತರಿಗೆ ಮಾತ್ರ ಸೆಪ್ಟೆಂಬರ್ 15 ರಂದು ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

ಈ ದಿನಾಂಕದೋಳಗೆ ಎಲ್ಲಾ ರೈತ ಬಾಂಧವರು ಕೂಡಲೇ ಇ – ಕೆವೈಸಿಯಲ್ಲಿ ರೈತರು ತಮ್ಮ ಆಧಾರ ಸಂಖ್ಯೆ ಯೊಂದಿಗೆ ಜೋಡಣೆ ಯಾಗಿರುವ ಮೋಬೈಲ್ ಸಂಖ್ಯೆಯನ್ನು ದಾಖಲಿಸಿ ಒಟಿಪಿ ಮುಖಾಂತರ ಇ- ಕೆವೈಸಿ ಮಾಡಿಸಬಹುದು. ಹಾಗೂ ತಮ್ಮ ಹತ್ತಿರ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ  ಇ- ಕೆವೈಸಿ ಮಾಡಿಸಿಕೋಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಗದಗ ಬೆಟಗೇರಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೀರಣ್ಣ ಗಡದ ರೈತ ಬಾಂಧವರಲ್ಲಿ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ

ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.

ಕೋವಿಡ್ ಲಸಿಕೆ 2021ರಲ್ಲಿ ಲಭ್ಯ ದಿಢೀರ್ ನಿರೀಕ್ಷೆ ಬೇಡ: ಡಬ್ಲೂಎಚ್ಒ ತಜ್ಞ

ಕೋವಿಡ್ ಲಸಿಕೆ ತಯಾರಿಸುತ್ತಿರುವ ಎಲ್ಲ ಪ್ರಯೋಗಗಳು ಈಗ ಯಶಸ್ವಿ ಹಾದಿಯಲ್ಲಿವೆ. ಸುರಕ್ಷತೆ ಮತ್ತು ರೋಗ ನಿರೋಧಕತೆ ಸೃಷ್ಟಿಸುವ ದೃಷ್ಟಿಯಲ್ಲಿ ಈ ಪ್ರಯೋಗಗಳು ಫಲ ನೀಡುತ್ತಿವೆ.

ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ

ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.