ಉತ್ತರಪ್ರಭ ಸುದ್ದಿ

ಚಿಟಗುಪ್ಪ: ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಯಾವುದೇ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ ಕಾರ್ಯಗಳೇ ಸಮಾಜ ಸೇವೆ ಎನಿಸಿಕೊಳ್ಳುತ್ತದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರ ಉನ್ನತಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಭಾಗದ ಜನಪ್ರೀಯ ನಾಯಕರೆಂದೇ ಜನಪ್ರೀಯತೆ ಪಡೆದ  ಶ್ರೀ ಸಿದ್ದು ಪಾಟೀಲರ ಸೇವಾ ಕಳಕಳಿಯ ಕಾರ್ಯ ಚಟುವಟಿಕೆಗಳು ಅನನ್ಯವಾಗಿವೆ. ಪ್ರಯುಕ್ತ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುವ ಮೂಲಕ ಸಿದ್ದು ಪಾಟೀಲರು ಪ್ರಸಿದ್ಧಿಯನ್ನು ಪಡೆದಿದ್ದಾರೆ.

ಯಾಕೇ ಈ ಮಾತು ಈಗೇಕೆ ಹೇಳಬೇಕಾಗಿತ್ತು ಎಂದರೆ ಹುಮಾನಾಬಾದ ವಿಧಾನಸಭಾ ಮತಕ್ಷೇತ್ರದ ತಾಳಮಡಗಿ ಗ್ರಾಮದ ಬಡ ರೈತ ಗೊಂಡ ಸಮಾಜದ ಸುಭಾಷ ತಂದೆ ಬೀರಪ್ಪ ಬಾಜೋಳಗಿ ಅವರ ಆಕಳು ಹೊಲದಲ್ಲಿ ಮೇಯುವಾಗ ಹಾವು ಕಡಿದು ಸ್ಥಳದಲ್ಲೇ ಸಾವನಪ್ಪಿತ್ತು. ಆಕಳು ಮನೆಗೆ ಆದಾಯ ತರುವ ಮೂಲವಾಗಿತ್ತು. ಕಾರಣ ಆಕಳು ಸಾವನಪ್ಪಿದ ಸುದ್ದಿ ತಿಳಿದು ಸಿದ್ದು ಪಾಟೀಲರು ರೈತನ ಮೆನೆಗೆ ಬೆಟ್ಟಿ ನೀಡಿ, ಆರ್ಥಿಕ ಸಹಾಯಧನ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ಸಂಬಂಧ ಪಟ್ಟ ಅಧಿಕಾರಿಗಳಿಗೆ ಫೋನ್ ಮೂಲಕ ಮಾತನಾಡಿ ಸರ್ಕಾರದ ಸೌಲಭ್ಯ  ರೈತರಿಗೆ ಒದಗಿಸುವಂತೆ ಮನವಿ ಮಾಡಿಕೊಂಡರು. ರೈತರೊಂದಿಗೆ ನಾನು ಸದಾ ಇರುತ್ತೇನೆ, ನೀವೆಲ್ಲರೂ ಧೈರ್ಯವಾಗಿ ಇರಬೇಕೆಂದರು. 

ಈ ಸಂದರ್ಭದಲ್ಲಿ ಅನೇಕ ಗೊಂಡ ಸಮಾಜದ ಮುಖಂಡರು ಗ್ರಾಮ ಪಂಚಾಯತ ಸದ್ಯಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 267 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 267 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾದಂತಾಗಿದೆ.

ಕೊರೋನಾ ಸೋಂಕಿತ ಮಹಿಳೆ ಸಾವು

ಕೊರೋನಾ ಸೋಂಕಿತ ಮಹಿಳೆ ಸಾವುವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ…

ಕೊರೊನಾ ಪಾಸಿಟಿವ್ – ಜೆಡಿಎಸ್ ನಾಯಕನ ಹೈಡ್ರಾಮಾ!

ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ…

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.