ಉತ್ತರಪ್ರಭ ಸುದ್ದಿ

ಚಿಟಗುಪ್ಪ: ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಯಾವುದೇ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ ಕಾರ್ಯಗಳೇ ಸಮಾಜ ಸೇವೆ ಎನಿಸಿಕೊಳ್ಳುತ್ತದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರ ಉನ್ನತಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಭಾಗದ ಜನಪ್ರೀಯ ನಾಯಕರೆಂದೇ ಜನಪ್ರೀಯತೆ ಪಡೆದ  ಶ್ರೀ ಸಿದ್ದು ಪಾಟೀಲರ ಸೇವಾ ಕಳಕಳಿಯ ಕಾರ್ಯ ಚಟುವಟಿಕೆಗಳು ಅನನ್ಯವಾಗಿವೆ. ಪ್ರಯುಕ್ತ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುವ ಮೂಲಕ ಸಿದ್ದು ಪಾಟೀಲರು ಪ್ರಸಿದ್ಧಿಯನ್ನು ಪಡೆದಿದ್ದಾರೆ.

ಯಾಕೇ ಈ ಮಾತು ಈಗೇಕೆ ಹೇಳಬೇಕಾಗಿತ್ತು ಎಂದರೆ ಹುಮಾನಾಬಾದ ವಿಧಾನಸಭಾ ಮತಕ್ಷೇತ್ರದ ತಾಳಮಡಗಿ ಗ್ರಾಮದ ಬಡ ರೈತ ಗೊಂಡ ಸಮಾಜದ ಸುಭಾಷ ತಂದೆ ಬೀರಪ್ಪ ಬಾಜೋಳಗಿ ಅವರ ಆಕಳು ಹೊಲದಲ್ಲಿ ಮೇಯುವಾಗ ಹಾವು ಕಡಿದು ಸ್ಥಳದಲ್ಲೇ ಸಾವನಪ್ಪಿತ್ತು. ಆಕಳು ಮನೆಗೆ ಆದಾಯ ತರುವ ಮೂಲವಾಗಿತ್ತು. ಕಾರಣ ಆಕಳು ಸಾವನಪ್ಪಿದ ಸುದ್ದಿ ತಿಳಿದು ಸಿದ್ದು ಪಾಟೀಲರು ರೈತನ ಮೆನೆಗೆ ಬೆಟ್ಟಿ ನೀಡಿ, ಆರ್ಥಿಕ ಸಹಾಯಧನ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ಸಂಬಂಧ ಪಟ್ಟ ಅಧಿಕಾರಿಗಳಿಗೆ ಫೋನ್ ಮೂಲಕ ಮಾತನಾಡಿ ಸರ್ಕಾರದ ಸೌಲಭ್ಯ  ರೈತರಿಗೆ ಒದಗಿಸುವಂತೆ ಮನವಿ ಮಾಡಿಕೊಂಡರು. ರೈತರೊಂದಿಗೆ ನಾನು ಸದಾ ಇರುತ್ತೇನೆ, ನೀವೆಲ್ಲರೂ ಧೈರ್ಯವಾಗಿ ಇರಬೇಕೆಂದರು. 

ಈ ಸಂದರ್ಭದಲ್ಲಿ ಅನೇಕ ಗೊಂಡ ಸಮಾಜದ ಮುಖಂಡರು ಗ್ರಾಮ ಪಂಚಾಯತ ಸದ್ಯಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ದಿಂಗಾಲೇಶ್ವರ ಶ್ರೀಗಳ ಹೇಳಿಕೆ: ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆ ಕಟ್ಟಲಾಗದು

ಉಪಕಾರ ಸ್ಮರಣಯೇ ಜನ್ಮದಿನವಾಗಿರುತ್ತದೆ. ಅಭಿನವ ಡಾ.ಅನ್ನದಾನ ಮಹಾಸ್ವಾಮಿಗಳ ಮೇಲಿನ ಭಕ್ತರ ಪ್ರೀತಿಗೆ ಬೆಲೆಯನ್ನು ಕಟ್ಟುವುದು ಅಸಾಧ್ಯವಾದ ಮಾತಾಗಿದೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ಹೇಳಿದರು.

ರೈತ ಸಂಘದ ನಿಡಗುಂದಿ ನಗರ ಘಟಕದ ಉದ್ಘಾಟನೆ
ರೈತ ಸಂಘ ರೈತ ಸ್ನೇಹಿ ಕಾರ್ಯ ಗೈಯಲಿ-ಶಿವಾನಂದ ಅವಟಿ

ಉತ್ತರಪ್ರಭ ಸುದ್ದಿನಿಡಗುಂದಿ: ಯಾವುದೇ ಸರಕಾರ ಇರಲಿ ಸದಾ ವಿರೋಧ ಪಕ್ಷದಂತೆ ಕಾರ್ಯನಿರ್ವಹಿಸಿ ರೈತರ ಸಮಸ್ಯೆ ನಿವಾರಿಸಲು…

ಗ್ರಾಮ ಪಂಚಾಯತಿಗಳಿಗೆ ನೇಮಕವಾದ ಆಡಳಿತಾಧಿಕಾರಿಗಳ ಕರ್ತವ್ಯಗಳೇನು..?

ನೇಮಕಗೊಂಡ ಆಡಳಿತಾಧಿಕಾರಿಗಳ ಕರ್ತವ್ಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ: 165 ಜನ ವೈದ್ಯಕೀಯ ಸಿಬ್ಬಂದಿಗೆ ಮೆತ್ತಿಕೊಂಡ ಸೋಂಕು!

ಹುಬ್ಬಳ್ಳಿ : ಕೊರೊನಾ ಅಟ್ಟಹಾಸದ ಮಧ್ಯೆ ವೈದ್ಯಕೀಯ ಸಿಬ್ಬಂದಿಗೆ ಮಹಾಮಾರಿಯ ಭಯ ಇನ್ನಷ್ಟು ಹೆಚ್ಚಾಗುತ್ತಿದೆ.