ಉತ್ತರಪ್ರಭ ಸುದ್ದಿ
ಆಲಮಟ್ಟಿ:
ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು, ಅಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸುತ್ತಿದ್ದು, ಬಿ.ಸಿ. ನಾಗೇಶ್ ರವರ ನಾಯಕತ್ವದಲ್ಲಿ ಶಿಕ್ಷಣ ಇಲಾಖೆ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದು ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಾಗು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಶಿಕ್ಷಣ ಇಲಾಖೆ ಹಾಗು ಶಿಕ್ಷಕರ ಮತ್ತು ಶಾಲಾ ಮಕ್ಕಳ ಅಭುಧ್ಯೇಯಕ್ಕಾಗಿ ಸಚಿವರು ಕೈಗೊಂಡಿರುವ ಸಮಯೋಚಿತ ಕಾರ್ಯಗಳು ಸ್ತುತ್ಯಾರ್ಹವಾಗಿವೆ ಎಂದರು. ಶೈಕ್ಷಣಿಕ ವಲಯ ಗುಣಮಟ್ಟದೊಂದಿಗೆ ಪ್ರಗತಿಯತ್ ಪ್ರಾಂಜಲ್ಯ ಮನಸ್ಸಿನಿಂದ ಕೊಂಡೊಯ್ಯಲು ಯತ್ನಿಸುತ್ತಿರುವುದು ನವದಿಸೆಯ ಸಂಚಲನ ಎಲ್ಲರಲ್ಲೂ ಮೂಡಿಸುತ್ತಿದೆ ಎಂದು ಅವರು ಸಚಿವ ಬಿ.ಸಿ.ನಾಗೇಶ್ ಅವರ ವ್ಯಕ್ತಿತ್ವ ಬಣ್ಣಿಸಿದ್ದಾರೆ.

ಈ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರ ಬೇಡಿಕೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ ಶಿಕ್ಷಣ ಸಚಿವರು, ಪ್ರಧಾನ ಕಾರ್ಯದಶಿ೯ಗಳು, ಆಯುಕ್ತರು ಸ್ಪಂದಿಸುತ್ತಿದ್ದು, ಶೇ 25 ಖಾಲಿ ವಗಾ೯ವಣೆ ಇಲ್ಲ ಎಂಬ ಅಂಶ ಹೊರತುಪಡಿಸಿ ಇನ್ನುಳಿದ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ, ಅವರಿಗೆ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೆವೆ ಎಂದರು. ವರ್ಗಾವಣೆಯ ವಿಷಯದಲ್ಲಿಯೂ ಇನ್ನಷ್ಟು ಪ್ರಯತ್ನ ಮುಂದುವರೆಸಲಾಗುತ್ತದೆ ಎಂದು ಶಂಭುಲಿಂಗನಗೌಡ ಪಾಟೀಲ ಹಾಗೂ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಕ್ಕ ಸಿಕ್ಕವರಿಗೆ ಚಾಕು ಇರಿತ ನಾಲ್ವರು ಗಂಭೀರ, ಓರ್ವ ಸಾವು!

ಬೆಂಗಳೂರು : ವ್ಯಕ್ತಿಯೊಬ್ಬ ದಾರಿಯಲ್ಲಿ ಹೋಗುತ್ತ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ತರಕಾರಿಗಳಲ್ಲಿ ಅರಳಿದ ಪೋಷಣೆಯ ಕಲಾಕೃತಿಗಳು..!

ನಿಡಗುಂದಿ: ಪಟ್ಟಣದ ಹೊರವಲಯದ ಕಮದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಯಿಪಲ್ಯೆ ಹಾಗೂ ಧಾನ್ಯಗಳಲ್ಲಿ ಪೋಷಣೆಯ…

ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಟಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.