ಉತ್ತರಪ್ರಭ ಸುದ್ದಿ
ನಿಡಗುಂದಿ: ಹಲ ಬಗೆಯ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಲು ಸಾಧ್ಯ ಎಂದು ತಹಶೀಲ್ದಾರ ಅನೀಲಕುಮಾರ ಢವಳಗಿ ಹೇಳಿದರು. ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಹಾಗು ಕನಾ೯ಟಕ ಕ್ರೀಡಾ ಪ್ರಾಧಿಕಾರ ಮತ್ತು ಮಣಗೂರ ಸರಕಾರಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಜರುಗಿದ ನಿಡಗುಂದಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯಕರ ಭಾವನೆಗೆ ಹಾಗು ಸುಂದರ ಭೂಷಣಕ್ಕೆ ಕ್ರೀಡೆಗಳು ಪ್ರೇರಣೆ ನೀಡುತ್ತವೆ ಎಂದರು.

ಮುಖ್ಯ ಅತಿಥಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಟಿ.ಗೌಡರ, ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿ ಜೊತೆಗೆ ಪ್ರತಿಭೆ ಪ್ರಕಾಶನಕ್ಕೆ ವರದಾನ. ಜ್ಞಾನ ಹೆಚ್ಚಳ, ಕ್ರಿಯಾಶೀಲತೆ, ಪರಿಪೂರ್ಣ ವ್ಯಕ್ತಿತ್ವ ಹೊಂದಲು ಇಂಥ ಗ್ರಾಮೀಣ ಕ್ರೀಡೆಗಳು ಉತ್ತಮ ವೇದಿಕೆಯಾಗಿದ್ದು ಕ್ರೀಡಾ ಕ್ಷೇತ್ರವನ್ನು ಯಾರು ಕಡೆಗಣಿಸಬಾರದು ಎಂದರು.

ನಿಡಗುಂದಿ ಪಪಂ ಮುಖ್ಯಾಧಿಕಾರಿ ರಮೇಶ ಮಾಡಬಾಳ, ಗ್ರಾಮೀಣ ಭಾಗದಲ್ಲಿ ಪ್ರತಿಭಾಶಾಲಿ ಕ್ರೀಡಾಪಟುಗಳಿದ್ದಾರೆ. ಕ್ರೀಡಾ ಹವ್ಯಾಸ ಬೆಳೆಸಿಕೊಂಡರೆ ಭಾಗಶಃ ರೋಗ ರುಜಿನುಗಳಿಂದ ಬಹುಪಾಲ ದೂರಯಿರಬಹುದು.ದೈಹಿಕ ಸಾಮಥ್ರ್ಯ ಜೀವನ ಸಂತಸಕ್ಕೆ ಕಾರಣ.ಕ್ರೀಡೆಗಳು ನಿಜಕ್ಕೂ ಸ್ವಸ್ಥ ಸಮಾಜದ ಆಸ್ತಿ. ಕ್ರೀಡೆಗಳಿಗೆ ಮಹತ್ವ ನೀಡಿ ಭವಿಷ್ಯತ್ತಿನ ಜೀವನ ಉಲ್ಲಾಸಮಯವಾಗಿಸಿಕೊಳ್ಳಿ ಎಂದರು. ಅತಿಥಿಗಳಾಗಿ ಬಸವರಾಜ ವಂದಾಲ, ಆರ್.ಎ.ನದಾಫ್, ಎಂ.ಎಸ್.ಮುಕಾತಿ೯ಹಾಳ, ಉದಯಕುಮಾರ ಮಾಶೆಟ್ಟಿ, ಶಿವಾನಂದ ಮಂಗಾನವರ, ಬಿ.ಎಂ.ಪಾಟೀಲ, ಎಂ.ಎಂ.ದೊಡಮನಿ, ಶಿವನಗೌಡ ಪಾಟೀಲ, ಕೆ.ಎಸ್.ಧನಶೆಟ್ಟಿ, ಎಸ್.ಎಸ್.ಅವಟಿ ಇತರರಿದ್ದರು.

Leave a Reply

Your email address will not be published. Required fields are marked *

You May Also Like

ಎನ್.ಆರ್.ಡಿ.ಡಬ್ಲೂ.ಪಿ ಯೋಜನೆ 210 ಕಾರ್ಮಿಕರು ಬೀದಿಗೆ : ಆದೇಶವಿದ್ರು ಸರ್ಕಾರ ಗಪ್ ಚುಪ್!

ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ನೀಡುತ್ತದೆ. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿಯೇ 210 ಕಾರ್ಮಿಕರನ್ನು ಸದ್ದಿಲ್ಲದೇ ಇಲಾಖೆಯೊಂದು ಬೀದಿಗೆ ತಳ್ಳಿದೆ. ಕಾರ್ಮಿಕ ಪರ ಆದೇಶ ನೀಡಿದ ಸರ್ಕಾರ ಮಾತ್ರ ಗಪ್ ಚುಪ್ ಆಗಿದೆ.

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ!: ವೈದ್ಯಕೀಯ ಶಿಕ್ಷಣ ಸಚಿವರಿಗೆ ಮಹಿಳಾ ವೈದ್ಯೆಯ ತರಾಟೆ!

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ. ಮೂವತ್ತು ಲಕ್ಷ ಪರಿಹಾರ ಕೊಟ್ಟು ಸಮಾಧಾನ ಮಾಡ್ತೀರೆನ್ರಿ. ನಿಮ್ಮದು ಒಂದು ಸರ್ಕಾರನೇನ್ರಿ? ಯಾರಿಗೆ ಬೇಕು ನಿಮ್ಮ ಹಣ ..? ಎಲ್ಲರೂ ಒಂದು ತಿಂಗಳ ಸಂಬಳ ಕೊಟ್ರೆ ಸಾಕು..! ಹಣಕೊಟ್ಟು ಸಮಾಧಾನ ಮಾಡ್ತಿರೇನ್ರೀ? ನನಗೆ ನಮ್ಮ ನಾಗೇಂದ್ರ ಬೇಕು.. ಇದು ಮಹಿಳಾ ವೈದ್ಯೆ ಒಬ್ಬರು ವೈದ್ಯಕೀಯ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪರಿ.

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…

ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಸನ್ಮಾನ.

ವರದಿ: ವಿಠಲ ಕೆಳೂತ್ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರಿನ ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಮಾಜಿ…