ಉತ್ತರಪ್ರಭ ಸುದ್ದಿ
ನಿಡಗುಂದಿ: ಹಲ ಬಗೆಯ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಲು ಸಾಧ್ಯ ಎಂದು ತಹಶೀಲ್ದಾರ ಅನೀಲಕುಮಾರ ಢವಳಗಿ ಹೇಳಿದರು. ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಹಾಗು ಕನಾ೯ಟಕ ಕ್ರೀಡಾ ಪ್ರಾಧಿಕಾರ ಮತ್ತು ಮಣಗೂರ ಸರಕಾರಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಜರುಗಿದ ನಿಡಗುಂದಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯಕರ ಭಾವನೆಗೆ ಹಾಗು ಸುಂದರ ಭೂಷಣಕ್ಕೆ ಕ್ರೀಡೆಗಳು ಪ್ರೇರಣೆ ನೀಡುತ್ತವೆ ಎಂದರು.

ಮುಖ್ಯ ಅತಿಥಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಟಿ.ಗೌಡರ, ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿ ಜೊತೆಗೆ ಪ್ರತಿಭೆ ಪ್ರಕಾಶನಕ್ಕೆ ವರದಾನ. ಜ್ಞಾನ ಹೆಚ್ಚಳ, ಕ್ರಿಯಾಶೀಲತೆ, ಪರಿಪೂರ್ಣ ವ್ಯಕ್ತಿತ್ವ ಹೊಂದಲು ಇಂಥ ಗ್ರಾಮೀಣ ಕ್ರೀಡೆಗಳು ಉತ್ತಮ ವೇದಿಕೆಯಾಗಿದ್ದು ಕ್ರೀಡಾ ಕ್ಷೇತ್ರವನ್ನು ಯಾರು ಕಡೆಗಣಿಸಬಾರದು ಎಂದರು.

ನಿಡಗುಂದಿ ಪಪಂ ಮುಖ್ಯಾಧಿಕಾರಿ ರಮೇಶ ಮಾಡಬಾಳ, ಗ್ರಾಮೀಣ ಭಾಗದಲ್ಲಿ ಪ್ರತಿಭಾಶಾಲಿ ಕ್ರೀಡಾಪಟುಗಳಿದ್ದಾರೆ. ಕ್ರೀಡಾ ಹವ್ಯಾಸ ಬೆಳೆಸಿಕೊಂಡರೆ ಭಾಗಶಃ ರೋಗ ರುಜಿನುಗಳಿಂದ ಬಹುಪಾಲ ದೂರಯಿರಬಹುದು.ದೈಹಿಕ ಸಾಮಥ್ರ್ಯ ಜೀವನ ಸಂತಸಕ್ಕೆ ಕಾರಣ.ಕ್ರೀಡೆಗಳು ನಿಜಕ್ಕೂ ಸ್ವಸ್ಥ ಸಮಾಜದ ಆಸ್ತಿ. ಕ್ರೀಡೆಗಳಿಗೆ ಮಹತ್ವ ನೀಡಿ ಭವಿಷ್ಯತ್ತಿನ ಜೀವನ ಉಲ್ಲಾಸಮಯವಾಗಿಸಿಕೊಳ್ಳಿ ಎಂದರು. ಅತಿಥಿಗಳಾಗಿ ಬಸವರಾಜ ವಂದಾಲ, ಆರ್.ಎ.ನದಾಫ್, ಎಂ.ಎಸ್.ಮುಕಾತಿ೯ಹಾಳ, ಉದಯಕುಮಾರ ಮಾಶೆಟ್ಟಿ, ಶಿವಾನಂದ ಮಂಗಾನವರ, ಬಿ.ಎಂ.ಪಾಟೀಲ, ಎಂ.ಎಂ.ದೊಡಮನಿ, ಶಿವನಗೌಡ ಪಾಟೀಲ, ಕೆ.ಎಸ್.ಧನಶೆಟ್ಟಿ, ಎಸ್.ಎಸ್.ಅವಟಿ ಇತರರಿದ್ದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಇಂದು ನಾಲ್ಕು ಪಾಸಿಟಿವ್: ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ!

ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ರೋಣದಲ್ಲಿ ಭೀಕರ ಅಪಘಾತ, ಕಾರ ಬ್ಲಾಸ್ಟ್ : 3 ಜನರ ಸಾವು

ಉತ್ತರಪ್ರಭರೋಣ: ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ…

ಸುತಗುಂಡಾರ : ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ

ಆಲಮಟ್ಟಿ : ಸನಿಹದ ಸುತಗುಂಡಾರ ಶ್ರೀ ಕರವೀರೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…

ಪಾಸ್ ಬುಕ್ ಮೇಲಿದ್ದ ಕನ್ನಡ ಮಾಯವಾಗಿದ್ದೇಕೆ?

ಬೆಂಗಳೂರು: ಇಲ್ಲಿನ ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.ಈ ಹಿಂದೆ…