ಉತ್ತರಪ್ರಭ ಸುದ್ದಿ
ನಿಡಗುಂದಿ:
ಯುವಜನ ಸಬಲೀಕರಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಮಣಗೂರ ಆಶ್ರಯದಲ್ಲಿ ನಿಡಗುಂದಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ದಿ.12 ರಂದು ಸೋಮವಾರ ನಡೆಯಲಿದೆ. ಪಟ್ಟಣದ ಹೊರವಲಯದ ಮಣಗೂರ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಂಡಿರುವ ಈ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಶಾಸಕ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಾಸಕ ಸೋಮನಗೌಡ ಪಾಟೀಲ ಉದ್ಘಾಟಿಸಲ್ಲಿದ್ದು ಕ್ರೀಡಾ ಜ್ಯೋತಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಸ್ವೀಕರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಾನಾ ಜನಪ್ರತಿನಿಧಿಗಳು ಸೇರಿದಂತೆ ಬಿಇಓ ಎಸ್.ಬಿ.‌ ಬಳಬಟ್ಟಿ, ತಹಶೀಲ್ದಾರ್ ಅನಿಲಕುಮಾರ ಢವಳಗಿ, ಇಓ ವಿ.ಎಸ್. ಹಿರೇಮಠ, ಚಂದ್ರಶೇಖರ ನುಗ್ಗಲಿ, ಬಿ.ಟಿ.ಗೌಡರ, ಶಿವಾನಂದ ಮಂಗಾನವರ, ಆರ್.ಎ. ನದಾಫ್, ಎಂ.ಎಸ್. ಮುಕಾರ್ತಿಹಾಳ ಇನ್ನೀತರರು ಆಗಮಿಸಲಿದ್ದಾರೆ ಎಂದು ಬಸವನಬಾಗೇವಾಡಿ ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ಎಸ್.ಎಸ್. ಅವಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…

ನೂತನ 52 ತಾಲೂಕುಗಳಲ್ಲಿ ಬಿಇಒ ಕಚೇರಿ ಮರೀಚಿಕೆ ? ಆರಂಭದ ಸುಳಿವೇ ಇಲ್ಲ ! ಪ್ರಾರಂಭ ಎಂದು ? ಬಿಇಒ ಕಚೇರಿ, ಸಿಬ್ಬಂದಿ ಮಂಜೂರಾತಿಗೆ ಆಗ್ರಹ

ಆಲಮಟ್ಟಿ : ಹೊಸ ಭರವಸೆಯ ಆಶಾ ಕಿರಣದೊಂದಿಗೆ ನೂತನವಾಗಿ ತೆಲೆಯತ್ತಿದ್ದ ರಾಜ್ಯದ 52 ನವ ತಾಲೂಕುಗಳು…

ಗದಗ ಜಿಲ್ಲೆಯಲ್ಲಿ ಬೀಗರ ಬುತ್ತಿಯಿಂದ ಕೊರೊನಾ ಭಯ..!

ಗದಗ: ಕೊರೊನಾ ಹೆಮ್ಮಾರಿ ಪ್ಯಾಟ್ಯಾಗಷ್ಟ ಗಿರಿಕಿ ಹೊಡೆಯುತ್ತಿತ್ತ. ಈಗ ಹಳ್ಳಿಗೂ ಬಂದು ಹಳ್ಳಿ ಜನ್ರಿಗೆ ಹಳಹಳಿ…