ಉತ್ತರಪ್ರಭ ಸುದ್ದಿ
ಆಲಮಟ್ಟಿ:
ನೆರೆಯ ಮಹಾರಾಷ್ಟ್ರ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಕೃಷ್ಣಾ ನದಿ ಹರಿವಿನಲ್ಲಿ ಹೆಚ್ಚಳವಾಗಿದೆ. ಕಾರಣ ಆಲಮಟ್ಟಿ ಜಲಾಶಯದ ಎಲ್ಲಾ 26 ಗೇಟ್ ಗಳ ಮೂಲಕ 1,25,000 ಕ್ಯುಸೆಕ್ ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ. ಬೆಳಿಗ್ಗೆಯಿಂದ 16 ಗೇಟ್ ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿತ್ತು. ಆದರೆ ಸಂಜೆಯ ವೇಳೆಗೆ ಎಲ್ಲಾ 26 ಗೇಟ್ ಗಳನ್ನು ತೆರೆದು ನೀರನ್ನು ಬಿಡಲಾಗುತ್ತಿದೆ.

ಸೋಮವಾರ ಸಂಜೆ ಜಲಾಶಯಕ್ಕೆ 77,000 ಕ್ಯುಸೆಕ್ ಒಳಹರಿವು ಇದ್ದು, ಅದು ಮಂಗಳವಾರ ಲಕ್ಷ ಕ್ಯುಸೆಕ್ ದಾಟಲಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ. ಮುಂಬರುವ ಎರಡು ದಿನಗಳಲ್ಲಿ ಜಲಾಶಯದ ಒಳಹರಿವು 1.20 ಲಕ್ಷ ಕ್ಯುಸೆಕ್ ದಾಟಲಿದೆ.ಈಗಾಗಲೇ ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಸುರಕ್ಷತೆಯ ದೃಷ್ಠಿಯಿಂದ ಜಲಾಶಯದ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದೆ. ಒಳಹರಿವಿಗಿಂತ ಹೆಚ್ಚಿನ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅಲ್ಲಿಯ ಕೃಷ್ಣಾ ಕಣಿವೆಯ ಎಲ್ಲಾ ಅಣೆಕಟ್ಟುಗಳು ಈಗಾಗಲೇ ಭರ್ತಿಯಾಗಿದ್ದು, ಅಣೆಕಟ್ಟಿನಿಂದಲೂ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಆದರೆ ಈ ಪ್ರವಾಹ ತಾತ್ಕಾಲಿಕ ಎನ್ನಲಾಗಿದ್ದು, ನಾಲ್ಕೈದು ದಿನಗಳಲ್ಲಿ ಕಡಿಮೆಯಾಗಲಿದೆ. ಆದರೆ ನೆರೆಯ ಯಾವುದೇ ಆತಂಕ ಇಲ್ಲ.
ಇಂದಿನ ಜಲಾಶಯದ ಮಟ್ಟ:
519.60 ಮೀ. ಗರಿಷ್ಠ ಎತ್ತರದ ಜಲಾಶಯದಲ್ಲಿ ಸೋಮವಾರ ಸಂಜೆ 519.58 ಮೀ. ಇದೆ. ಜಲಾಶಯಕ್ಕೆ 77,000 ಕ್ಯುಸೆಕ್ ಒಳಹರಿವು ಇದ್ದು, 1,25,000 ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಜಲಾಶಯದಲ್ಲಿ 122.659 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಬಲಭಾಗದ ಕೆಪಿಸಿಎಲ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ಅಂದರೆ 290 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಅಡಕೆ ನುಂಗಿದ ಮಗು ಉಸಿರುಗಟ್ಟಿ ಸಾವು

ತಾಲೂಕು ಹೆದ್ದೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. 1 ವರ್ಷ ಒಂದು ತಿಂಗಳ ಮಗು ನಿಶಾನ್ ಮೃತಪಟ್ಟಿದೆ. ಸಂದೇಶ ಮತ್ತು ಅರ್ಚನಾ ದಂಪತಿಗಳ ಮಗು ನಿಶಾನ್ ಆರೋಗ್ಯವಾಗಿತ್ತು. ಆಟವಾಡುವಾಗ ಅಡಕೆ ನುಂಗಿದ್ದರಿಂದ, ಉಸಿರುರಾಡಲು ಕಷ್ಟವಾಗಿದೆ. ತಕ್ಷಣವೇ ಮಗುವನ್ನು ಕಟ್ಟೆಹಕ್ಕಲುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿಂದ ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಆದರೆ, ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿದೆ.

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ