ನಿಡಗುಂದಿ: ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಕ್ರೀಡಾಕೂಟ ಸಹಕಾರಿ ಆಗಿದೆ ಎಂದು ಪಿಡಿಓ ಮಹಾಂತೇಶ ಹೊಸಗೌಡರ ಹೇಳಿದರು.
ತಾಲ್ಲೂಕಿನ ಬಳಬಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಪಂಚಾಯ್ತಿ ನಿಡಗುಂದಿ ಹಾಗೂ ಗ್ರಾಮ ಪಂಚಾಯ್ತಿ ಬಳಬಟ್ಟಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಿಡಗುಂದಿ ತಾಲ್ಲೂಕಿನ ಬಳಬಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಪಿಡಿಓ ಎಂ.ಡಿ. ಹೊಸಗೌಡರ ಚಾಲನೆ ನೀಡಿದರು.


ಗ್ರಾಮೀಣ ಹಾಗೂ ದೇಶಿಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯ್ತಿ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ದೇಸಿ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಕೊಕ್ಕೊ ಮತ್ತು ಎತ್ತಿನಬಂಡಿ ಸ್ಪರ್ಧೆಗೆ ಆಧ್ಯತೆ ನೀಡಲಾಗಿದೆ ಎಂದು ಹೇಳಿದರು.
ಗ್ರಾಮದ ಮುಖಂಡರಾದ ನಿಂಗಪ್ಪ ಕಲಾದಗಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು-ಗೆಲವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಕ್ರೀಡಾ ಮನೋಭಾವದಿಂದ ಭಾಗವಹಿಸುವ ಮೂಲಕ ಕ್ರೀಡಾಕೂಟದ ಯಶಸ್ಸಿಗೆ ಶ್ರಮಿಸುವಂತೆ ತಿಳಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಿತ್ರಾ ಕಲಾದಗಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಸವರಾಜ್ ಬೋಳಿ, ಮಾನಪ್ಪ ಹುಗ್ಗಿ, ಡಿಇಒ ಸಂಗಮೇಶ ಹಿರೇಮಠ, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಡ್ಯಾರೆನ್ ಜನಾಂಗೀಯ ನಿಂದನೆಗೆ ಒಳಗಾಗಿದ್ದು ಸತ್ಯವೇ?

ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್…

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…

ಜಡೇಜಾಗೆ ಧೋನಿ ಕೊನೆಯ ಓವರ್ ನೀಡಿದ್ದೇಕೆ?

ಶಾರ್ಜಾ : ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ತಂಡ ನಿನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡಿದೆ. ರೋಚಕ ಹಂತಕ್ಕೆ ಬಂದು ತಲುಪಿದ್ದ ಪಂದ್ಯದಲ್ಲಿ ಧೋನಿ ಅವರ ಕೆಟ್ಟ ನಿರ್ಧಾರದಿಂದಾಗಿ ಸೋಲು ಕಾಣುವಂತಾಯಿತು ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.