ನಿಡಗುಂದಿ: ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಕ್ರೀಡಾಕೂಟ ಸಹಕಾರಿ ಆಗಿದೆ ಎಂದು ಪಿಡಿಓ ಮಹಾಂತೇಶ ಹೊಸಗೌಡರ ಹೇಳಿದರು.
ತಾಲ್ಲೂಕಿನ ಬಳಬಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಪಂಚಾಯ್ತಿ ನಿಡಗುಂದಿ ಹಾಗೂ ಗ್ರಾಮ ಪಂಚಾಯ್ತಿ ಬಳಬಟ್ಟಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಿಡಗುಂದಿ ತಾಲ್ಲೂಕಿನ ಬಳಬಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಪಿಡಿಓ ಎಂ.ಡಿ. ಹೊಸಗೌಡರ ಚಾಲನೆ ನೀಡಿದರು.


ಗ್ರಾಮೀಣ ಹಾಗೂ ದೇಶಿಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯ್ತಿ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ದೇಸಿ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಕೊಕ್ಕೊ ಮತ್ತು ಎತ್ತಿನಬಂಡಿ ಸ್ಪರ್ಧೆಗೆ ಆಧ್ಯತೆ ನೀಡಲಾಗಿದೆ ಎಂದು ಹೇಳಿದರು.
ಗ್ರಾಮದ ಮುಖಂಡರಾದ ನಿಂಗಪ್ಪ ಕಲಾದಗಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು-ಗೆಲವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಕ್ರೀಡಾ ಮನೋಭಾವದಿಂದ ಭಾಗವಹಿಸುವ ಮೂಲಕ ಕ್ರೀಡಾಕೂಟದ ಯಶಸ್ಸಿಗೆ ಶ್ರಮಿಸುವಂತೆ ತಿಳಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಿತ್ರಾ ಕಲಾದಗಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಸವರಾಜ್ ಬೋಳಿ, ಮಾನಪ್ಪ ಹುಗ್ಗಿ, ಡಿಇಒ ಸಂಗಮೇಶ ಹಿರೇಮಠ, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…

ಆಲಮಟ್ಟಿ: 75 ರ ಉತ್ಸವ ಚಿಣ್ಣರ ಸಂಭ್ರಮ..!

ಆಲಮಟ್ಟಿ: ಈಗ ದೇಶಭಕ್ತಿಯ ಪ್ರೇಮಾಂಕುರದಲ್ಲಿ ಪುಟಾಣಿ ಚಿಣ್ಣರು ಸಹ ಮಿಂದೆದ್ದು ಉಲ್ಲಾಸದಿಂದ ಸಂಭ್ರಮಿಸುತ್ತಿದ್ದಾರೆ. 75 ನೇ…

ತಂಬಾಕು ತೀಟೆ ದಾಸರಾದರೆ ಬಾಳೆಲ್ಲ ಗೋಳು-ಶಶಿಕಾಂತ ಕುಮಟಿಹಳ್ಳಿ

ಹೂಲಗೇರಿ: ತಂಬಾಕು ನಿರ್ಮೂಲನಾ ಜಾಗೃತಿ ದಿನಾಚರಣೆ ಕೆರೂರ ( ಬಾಗಲಕೋಟೆ ಜಿಲ್ಲೆ)ಎಲ್ಲ ಭಾಗ್ಯಗಳಲ್ಲೇ ಆರೋಗ್ಯ ಭಾಗ್ಯವೇ…