ಉತ್ತರಪ್ರಭ ಸುದ್ದಿ
ನಿಡಗುಂದಿ:
ಯಾವುದೇ ಸರಕಾರ ಇರಲಿ ಸದಾ ವಿರೋಧ ಪಕ್ಷದಂತೆ ಕಾರ್ಯನಿರ್ವಹಿಸಿ ರೈತರ ಸಮಸ್ಯೆ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ರೈತ ಸಂಘ ಇನ್ನಷ್ಟು ರೈತ ಸ್ನೇಹಿ ಕಾರ್ಯ ಮಾಡಲಿ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಶಿವಾನಂದ ಅವಟಿ ಹೇಳಿದರು. ಪಟ್ಟಣದಲ್ಲಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನಗರ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ನಿಡಗುಂದಿಯ ರುದ್ರಮುನಿ ಸ್ವಾಮೀಜಿ ಮಾತನಾಡಿ,ರೈತ ಸಂಘಟನೆಯಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡುವರು, ಬಸವಣ್ಣನವರ ತತ್ವದಂತೆ ಎಲ್ಲರೂ ಪ್ರಾಮಾಣಿಕರಾಗಿ ನಿಷ್ಠಾವಂತರಾಗಿ ಕೆಲಸ ಮಾಡಬೇಕು ಅದರಲ್ಲಿಯೇ ಕೈಲಾಸ ಕಾಣಬೇಕು ಆಗ ಮಾತ್ರ ದೇಶದ ಬೆನ್ನೆಲುಬಾಗಿರುವ ರೈತ ಸಮಾಜದಲ್ಲಿ ತಲೆ ಎತ್ತಿ ಬಾಳಬಲ್ಲ ಎಂದರು.

ಎಸ್ ಕೆ ಗೌಡರ, ಹೆಚ್.ಎ. ಲಷ್ಕರಿ, ಕೆ.ಎಂ. ಬಿರಾದಾರ, ಆರ್.ಬಿ.ಬಾಣಕರ, ರಂಗಪ್ಪ ಯಳ್ಳಿಗುತ್ತಿ , ಹನುಮಂತ ಬೆನಕಟ್ಟಿ, ಎಸ್.ಎಂ. ಪಟ್ಟಣಶೆಟ್ಟಿ , ಬಿ.ಎಸ್.ಪಠಾಣ , ತಿರುಪತಿ ಬಂಡಿವಡ್ಡರ, ಬಸವರಾಜ ಬಾಗೇವಾಡಿ ಮಾತನಾಡಿದರು.
ಪದಾಧಿಕಾರಿಗಳು:
ನಿಡಗುಂದಿ ನಗರ ಘಟಕದ ಗೌರವಾಧ್ಯಕ್ಷರಾಗಿ ಎ.ಎಂ. ಲಷ್ಕರಿ, ಅಧ್ಯಕ್ಷರಾಗಿ ರಾಜು ನದಾಫ್, ಉಪಾಧ್ಯಕ್ಷರಾಗಿ ಆರ್.ಎಸ್. ಉಕ್ಕಲಿ, ಜಿ.ಎಸ್.ತಳವಾರ, ದಾವಲಮಲ್ಲಿಕ್ ನದಾಫ್, ನೂರ ಅಹಮ್ಮದ ಹೆರಕಲ್, ಪ್ರಧಾನ ಕಾರ್ಯದರ್ಶಿಯಾಗಿ ಶಿವನಗೌಡ ಪಾಟೀಲ , ಕಾರ್ಯದರ್ಶಿ ಮೋತಿಲಾಲ ಉಣ್ಣಿಬಾವಿ, ಸಂಚಾಲಕರಾಗಿ ಅಮೀರ ಹಮ್ಜಾ ನಾಯ್ಕೋಡಿ, ಹಸನ ಡೊಂಗ್ರಿ ನಧಾಫ ಸೇರಿದಂತೆ ಅನೇಕರಿಗೆ ನಿಡಗುಂದಿ ತಾಲ್ಲೂಕು ಅಧ್ಯಕ್ಷರಾದ ಕೆ.ಎಂ.ಬಿರಾದಾರ (ಗುಡ್ನಾಳ) ಅವರು ಪದಾಧಿಕಾರಿಗಳಿಗೆ ಸಂಘದ ನಿಯಮಾವಳಿಗಳನ್ನು ತಿಳಿಸಿ, ಪ್ರಮಾಣವಚನ ಮಾಡಿಸಿ ಆದೇಶ ಪ್ರತಿ ವಿತರಿಸಿದರು.

Leave a Reply

Your email address will not be published. Required fields are marked *

You May Also Like

ನಾಳೆ ಮೀಡಿಯಾ ಕ್ಲಬ್ ನಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

ಕೊಪ್ಪಳ: ಕರ್ನಾಟಕ ಪತ್ರಿಕಾ ದಿನಾಚರಣೆಯನ್ನು ಕೊಪ್ಪಳ ಮೀಡಿಯಾ ಕ್ಲಬ್ ವತಿಯಿಂದ ಜು. 1ರಂದು ಬೆಳಿಗ್ಗೆ 10.30ಕ್ಕೆ…

ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣ ಏಳು ಜನರ ಅಮಾನತ್ತು…!

ಉತ್ತರಪ್ರಭ ಸುದ್ದಿಗದಗ: ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣ. ಐವರು ಮೇಲ್ವಿಚಾರಕರು, ಇಬ್ಬರು…

ಕೆರೆಗೆ ಮರುಜೀವ ನೀಡಿದ ಧರ್ಮಸ್ಥಳ ಯೋಜನೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊAಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್

ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.