ಉತ್ತರಪ್ರಭ ಸುದ್ದಿ
ಆಲಮಟ್ಟಿ:
ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ ಇಲ್ಲಿ ಆಸ್ತಿತ್ವಕ್ಕೆ ಬಂದಿದೆ. ಈರಯ್ಯ ಸಾಲಿಮಠ ಸಾನ್ನಿಧ್ಯ ಹಾಗು ರವಿ ಕೋತಿನ ಅಧ್ಯಕ್ಷತೆಯಲ್ಲಿ ಶನಿವಾರ ಆಸ್ತಿತ್ವಕ್ಕೆ ಬಂದ ಮಹಿಳಾ ಘಟಕ ಆಲಮಟ್ಟಿ ಶಾಖೆಯ ಉದ್ಘಾಟನೆ ನೆರವೇರಿತು. ಮಾಧುರಾಯನಗೌಡ ಪಾಟೀಲ, ಮಲ್ಲಯ್ಯ ನಾಗೂರಮಠ, ಯಲಗೂರದಪ್ಪ ಹುಗ್ಗಿ, ವೆಂಕಟೇಶ ವಡ್ಡರ, ಸರಸ್ವತಿ ವಸ್ತ್ರದ,ರೇಣುಕಾ ಕಾರಿ, ಸುಮಿತ್ರಾ ಗಣಿ, ಬಿಬಿಜಾನ್ ವಾಲಿಕಾರ ಮತ್ತಿತರರು ಅತಿಥಿಗಳಾಗಿದ್ದರು.

ಹೊಸದಾಗಿ ರಚಿತವಾಗಿರುವ ಈ ಮಹಿಳಾ ಘಟಕದ ಸದಸ್ಯರು ಕ್ರಿಯಾಶೀಲರಾಗಿ ಸಂಘವನ್ನು ಮುನ್ನಡೆಸಿಕೊಂಡು ಹೋಗಬೇಕು. ಅನ್ನದಾತ ರೈತರ ಕುರಿತಾದ ಸಮಸ್ಯೆಗಳು ಉದ್ಬವಿಸಿದಾಗ ಹೋರಾಟಪರ ಗಟ್ಟಿ ಧ್ವನಿ ಎತ್ತಿ ನ್ಯಾಯ ದೊರಕಿಸಲು ಪ್ರಯತ್ನಿಸಬೇಕು ಎಂದು ನೂತನ ಪದಾಧಿಕಾರಿಗಳಿಗೆ ನಿಡಗುಂದಿ ರೈತ ಸಂಘ, ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಸಲಹೆ ನೀಡಿದರು.

ರವಿ ಕೋತಿನ, ಮಾದುರಾಯಗೌಡ ಪಾಟೀಲ, ಮಾನಸಿಂಗ್ ಲಮಾಣಿ, ಶೇಖಪ್ಪ ಕೋಳ್ಳಾರ, ರಮೇಶ ವಡ್ಡರ , ಮಂಜು ವಿಶ್ವರ, ರಾಜು ಎಲಿಗಾರ ಉಪಸ್ಥಿತರಿದ್ದರು.

ಪದಾಧಿಕಾರಿಗಳು: ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಆಲಮಟ್ಟಿ ಹೊಸ ಶಾಖೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕಸ್ತೂರಿ ವಡ್ಡರ, ಪ್ರಧಾನ ಕಾರ್ಯದರ್ಶಿಯಾಗಿ ಸುವಣಾ೯ ಬೇನಸೂರ, ಕೋಶ್ಯಾಧ್ಯಕ್ಷರಾಗಿ ಹಣಮವ್ವ ವಡ್ಡರ, ಸಂಘಟನಾಧ್ಯಕ್ಷರಾಗಿ ಪುಳಿಯವ್ವ ವಡ್ಡರ ನೇಮಕ ಮಾಡಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಕ್ಷಕ ಸ್ನೇಹಿ ಸಚಿವ ನಾಗೇಶ್ ಗೆ ಅಭಿನಂದಿಸಿದ ಶಿಕ್ಷಕರ ಸಂಘ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡ ಶಾಲಾ…

ತಮ್ಮ ಅಭ್ಯರ್ಥಿಗಳು ಗೆಲ್ಲಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105…

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.