ಉತ್ತರಪ್ರಭ ಸುದ್ದಿ
ಆಲಮಟ್ಟಿ:
ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ ಇಲ್ಲಿ ಆಸ್ತಿತ್ವಕ್ಕೆ ಬಂದಿದೆ. ಈರಯ್ಯ ಸಾಲಿಮಠ ಸಾನ್ನಿಧ್ಯ ಹಾಗು ರವಿ ಕೋತಿನ ಅಧ್ಯಕ್ಷತೆಯಲ್ಲಿ ಶನಿವಾರ ಆಸ್ತಿತ್ವಕ್ಕೆ ಬಂದ ಮಹಿಳಾ ಘಟಕ ಆಲಮಟ್ಟಿ ಶಾಖೆಯ ಉದ್ಘಾಟನೆ ನೆರವೇರಿತು. ಮಾಧುರಾಯನಗೌಡ ಪಾಟೀಲ, ಮಲ್ಲಯ್ಯ ನಾಗೂರಮಠ, ಯಲಗೂರದಪ್ಪ ಹುಗ್ಗಿ, ವೆಂಕಟೇಶ ವಡ್ಡರ, ಸರಸ್ವತಿ ವಸ್ತ್ರದ,ರೇಣುಕಾ ಕಾರಿ, ಸುಮಿತ್ರಾ ಗಣಿ, ಬಿಬಿಜಾನ್ ವಾಲಿಕಾರ ಮತ್ತಿತರರು ಅತಿಥಿಗಳಾಗಿದ್ದರು.

ಹೊಸದಾಗಿ ರಚಿತವಾಗಿರುವ ಈ ಮಹಿಳಾ ಘಟಕದ ಸದಸ್ಯರು ಕ್ರಿಯಾಶೀಲರಾಗಿ ಸಂಘವನ್ನು ಮುನ್ನಡೆಸಿಕೊಂಡು ಹೋಗಬೇಕು. ಅನ್ನದಾತ ರೈತರ ಕುರಿತಾದ ಸಮಸ್ಯೆಗಳು ಉದ್ಬವಿಸಿದಾಗ ಹೋರಾಟಪರ ಗಟ್ಟಿ ಧ್ವನಿ ಎತ್ತಿ ನ್ಯಾಯ ದೊರಕಿಸಲು ಪ್ರಯತ್ನಿಸಬೇಕು ಎಂದು ನೂತನ ಪದಾಧಿಕಾರಿಗಳಿಗೆ ನಿಡಗುಂದಿ ರೈತ ಸಂಘ, ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಸಲಹೆ ನೀಡಿದರು.

ರವಿ ಕೋತಿನ, ಮಾದುರಾಯಗೌಡ ಪಾಟೀಲ, ಮಾನಸಿಂಗ್ ಲಮಾಣಿ, ಶೇಖಪ್ಪ ಕೋಳ್ಳಾರ, ರಮೇಶ ವಡ್ಡರ , ಮಂಜು ವಿಶ್ವರ, ರಾಜು ಎಲಿಗಾರ ಉಪಸ್ಥಿತರಿದ್ದರು.

ಪದಾಧಿಕಾರಿಗಳು: ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಆಲಮಟ್ಟಿ ಹೊಸ ಶಾಖೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕಸ್ತೂರಿ ವಡ್ಡರ, ಪ್ರಧಾನ ಕಾರ್ಯದರ್ಶಿಯಾಗಿ ಸುವಣಾ೯ ಬೇನಸೂರ, ಕೋಶ್ಯಾಧ್ಯಕ್ಷರಾಗಿ ಹಣಮವ್ವ ವಡ್ಡರ, ಸಂಘಟನಾಧ್ಯಕ್ಷರಾಗಿ ಪುಳಿಯವ್ವ ವಡ್ಡರ ನೇಮಕ ಮಾಡಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಮ್ಎಲ್ಎ ಸಾಹೇಬ್ರಿಗೆ ಹೇಳಿ ಹೇಳಿ ಸಾಕಾಗಿ ಹೋಯ್ತು!: ರೈತರ…, ರೊಕ್ಕಾ ಹಾಕಿ ರಸ್ತೆ ರಿಪೇರಿ ಮಾಡಸಾಕತ್ತಾರ..!

ಸಾಕಷ್ಟು ರೈತರು ತಮ್ಮ ಹೊಲಗಳಿಗೆ ದಾರಿ ಇಲ್ಲದೆ ಪರದಾಡುವ ಪರಿಸ್ಥಿತಿಯಲ್ಲಿ, ದಾರಿ ಸರಿಪಡಿಸುವಂತೆ ಪರಿ ಪರಿಯಾಗಿ ಬೇಡಿದರೂ ಸ್ಥಳೀಯ ಶಾಸಕರು ಮಾತ್ರ ಸ್ಪಂದಿಸದೆ ಇರುವುದು ಶಾಸಕರು ಬೇಜವ್ದಾರಿಗೆ ಹಿಡಿದ ಕೈಗನ್ನಡಿಯಂತಾಗಿದೆ.

ಕಾಫಿಗೂ ಕೊರೊನಾ ಕಾಟ, ಬೆಳೆಗಾರರ ಸಂಕಷ್ಟ..!

ಲಾಕ್ ಡೌನ್ ಹಿನ್ನೆಲೆ ಕಾರ್ಮಿಕ ಕುಟುಂಬಗಳ ಪರಿಸ್ಥಿತಿ ಹೇಳತೀರದಾಗಿದೆ. ಕಾಫಿ ಉದ್ಯಮವನ್ನೆ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇನ್ನು ಕಾಫಿ ಉತ್ಪಾದನಾ ಉದ್ಯಮದ ಮೇಲೂ ಲಾಕ್ ಡೌನ್ ಪರಿಣಾಮ ಬೀರಿದೆ. ಇದರಿಂದ ಕಾಫಿ ಕೈಗಾರಿಕೆಗಳು ಸಂಕಷ್ಟ ೆದುರಿಸುವಂತಾಗಿದೆ.

ಗ್ರಾಪಂ ಮಾಜಿ ಅಧ್ಯಕ್ಷನ ದರ್ಪ!: ಮರಳು ಟಿಪ್ಪರ್ ನಿಧಾನವಾಗಿ ಓಡಿಸಿ ಅಂದಿದ್ದಕ್ಕೆ ಹಲ್ಲೆ ಮಾಡಿದ ಆರೋಪ

ಹೇಳೋದು ವೇದಾಂತ, ತಿನ್ನೋದು ಬದನೆಕಾಯಿ ಎನ್ನುತ್ತಾರಲ್ಲ, ಆ ರೀತಿಯ ಕಥೆಯಿದು. ಇಲ್ಲೊಬ್ಬ ವ್ಯಕ್ತಿ ಊರಿನ ಮುಖಂಡ. ಪ್ರತಿ ದಿನ ನಾಲ್ಕಾರು ಜನಕ್ಕೆ ಬುದ್ಧಿ ಹೇಳುತ್ತಿದ್ದ. ಸದ್ಯ ಈ ವ್ಯಕ್ತಿಯೇ ಕುಟುಂಬವೊಂದರ ಮೇಲೆ ದರ್ಪ ಮೆರೆದಿದ್ದಾನೆ.

ಮಳೆ ಬಂದರೆ ಸಾಕು ಹಾಸ್ಟೆಲ್ ತುಂಬ ನೀರು; ಪರದಾಡುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳು..!

ಉತ್ತರಪ್ರಭಗದಗ: ನಿನ್ನೆ ರಾತ್ತಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಗದಗ ನಗರದ ಹಾತಲಗೇರಿ ರಸ್ತೆಯಲ್ಲಿರುವ…