ಉತ್ತರಪ್ರಭ ಸುದ್ದಿ
ಆಲಮಟ್ಟಿ:
ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ ಇಲ್ಲಿ ಆಸ್ತಿತ್ವಕ್ಕೆ ಬಂದಿದೆ. ಈರಯ್ಯ ಸಾಲಿಮಠ ಸಾನ್ನಿಧ್ಯ ಹಾಗು ರವಿ ಕೋತಿನ ಅಧ್ಯಕ್ಷತೆಯಲ್ಲಿ ಶನಿವಾರ ಆಸ್ತಿತ್ವಕ್ಕೆ ಬಂದ ಮಹಿಳಾ ಘಟಕ ಆಲಮಟ್ಟಿ ಶಾಖೆಯ ಉದ್ಘಾಟನೆ ನೆರವೇರಿತು. ಮಾಧುರಾಯನಗೌಡ ಪಾಟೀಲ, ಮಲ್ಲಯ್ಯ ನಾಗೂರಮಠ, ಯಲಗೂರದಪ್ಪ ಹುಗ್ಗಿ, ವೆಂಕಟೇಶ ವಡ್ಡರ, ಸರಸ್ವತಿ ವಸ್ತ್ರದ,ರೇಣುಕಾ ಕಾರಿ, ಸುಮಿತ್ರಾ ಗಣಿ, ಬಿಬಿಜಾನ್ ವಾಲಿಕಾರ ಮತ್ತಿತರರು ಅತಿಥಿಗಳಾಗಿದ್ದರು.

ಹೊಸದಾಗಿ ರಚಿತವಾಗಿರುವ ಈ ಮಹಿಳಾ ಘಟಕದ ಸದಸ್ಯರು ಕ್ರಿಯಾಶೀಲರಾಗಿ ಸಂಘವನ್ನು ಮುನ್ನಡೆಸಿಕೊಂಡು ಹೋಗಬೇಕು. ಅನ್ನದಾತ ರೈತರ ಕುರಿತಾದ ಸಮಸ್ಯೆಗಳು ಉದ್ಬವಿಸಿದಾಗ ಹೋರಾಟಪರ ಗಟ್ಟಿ ಧ್ವನಿ ಎತ್ತಿ ನ್ಯಾಯ ದೊರಕಿಸಲು ಪ್ರಯತ್ನಿಸಬೇಕು ಎಂದು ನೂತನ ಪದಾಧಿಕಾರಿಗಳಿಗೆ ನಿಡಗುಂದಿ ರೈತ ಸಂಘ, ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಸಲಹೆ ನೀಡಿದರು.

ರವಿ ಕೋತಿನ, ಮಾದುರಾಯಗೌಡ ಪಾಟೀಲ, ಮಾನಸಿಂಗ್ ಲಮಾಣಿ, ಶೇಖಪ್ಪ ಕೋಳ್ಳಾರ, ರಮೇಶ ವಡ್ಡರ , ಮಂಜು ವಿಶ್ವರ, ರಾಜು ಎಲಿಗಾರ ಉಪಸ್ಥಿತರಿದ್ದರು.

ಪದಾಧಿಕಾರಿಗಳು: ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಆಲಮಟ್ಟಿ ಹೊಸ ಶಾಖೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕಸ್ತೂರಿ ವಡ್ಡರ, ಪ್ರಧಾನ ಕಾರ್ಯದರ್ಶಿಯಾಗಿ ಸುವಣಾ೯ ಬೇನಸೂರ, ಕೋಶ್ಯಾಧ್ಯಕ್ಷರಾಗಿ ಹಣಮವ್ವ ವಡ್ಡರ, ಸಂಘಟನಾಧ್ಯಕ್ಷರಾಗಿ ಪುಳಿಯವ್ವ ವಡ್ಡರ ನೇಮಕ ಮಾಡಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನನ್ನ ಹುಟ್ಟು ಹಬ್ಬದ ಸಂಭ್ರಮಕ್ಕಿಂತ ನಿಮ್ಮ ಆರೋಗ್ಯ ಮುಖ್ಯ!!

ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ,…

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಡಾಂಬರೀಕರಣಕ್ಕೆ ಶಾಸಕ ರಾಮಣ್ಣ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹಾದು ಹೋಗುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ 06 ರಲ್ಲಿ ಮಳೆಯಿಂದ ಹಾನಿಗೀಡಾದ ಸುಮಾರು…

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.