ಉತ್ತರಪ್ರಭ ಸುದ್ದಿ
ಆಲಮಟ್ಟಿ:
ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ ಇಲ್ಲಿ ಆಸ್ತಿತ್ವಕ್ಕೆ ಬಂದಿದೆ. ಈರಯ್ಯ ಸಾಲಿಮಠ ಸಾನ್ನಿಧ್ಯ ಹಾಗು ರವಿ ಕೋತಿನ ಅಧ್ಯಕ್ಷತೆಯಲ್ಲಿ ಶನಿವಾರ ಆಸ್ತಿತ್ವಕ್ಕೆ ಬಂದ ಮಹಿಳಾ ಘಟಕ ಆಲಮಟ್ಟಿ ಶಾಖೆಯ ಉದ್ಘಾಟನೆ ನೆರವೇರಿತು. ಮಾಧುರಾಯನಗೌಡ ಪಾಟೀಲ, ಮಲ್ಲಯ್ಯ ನಾಗೂರಮಠ, ಯಲಗೂರದಪ್ಪ ಹುಗ್ಗಿ, ವೆಂಕಟೇಶ ವಡ್ಡರ, ಸರಸ್ವತಿ ವಸ್ತ್ರದ,ರೇಣುಕಾ ಕಾರಿ, ಸುಮಿತ್ರಾ ಗಣಿ, ಬಿಬಿಜಾನ್ ವಾಲಿಕಾರ ಮತ್ತಿತರರು ಅತಿಥಿಗಳಾಗಿದ್ದರು.

ಹೊಸದಾಗಿ ರಚಿತವಾಗಿರುವ ಈ ಮಹಿಳಾ ಘಟಕದ ಸದಸ್ಯರು ಕ್ರಿಯಾಶೀಲರಾಗಿ ಸಂಘವನ್ನು ಮುನ್ನಡೆಸಿಕೊಂಡು ಹೋಗಬೇಕು. ಅನ್ನದಾತ ರೈತರ ಕುರಿತಾದ ಸಮಸ್ಯೆಗಳು ಉದ್ಬವಿಸಿದಾಗ ಹೋರಾಟಪರ ಗಟ್ಟಿ ಧ್ವನಿ ಎತ್ತಿ ನ್ಯಾಯ ದೊರಕಿಸಲು ಪ್ರಯತ್ನಿಸಬೇಕು ಎಂದು ನೂತನ ಪದಾಧಿಕಾರಿಗಳಿಗೆ ನಿಡಗುಂದಿ ರೈತ ಸಂಘ, ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಸಲಹೆ ನೀಡಿದರು.

ರವಿ ಕೋತಿನ, ಮಾದುರಾಯಗೌಡ ಪಾಟೀಲ, ಮಾನಸಿಂಗ್ ಲಮಾಣಿ, ಶೇಖಪ್ಪ ಕೋಳ್ಳಾರ, ರಮೇಶ ವಡ್ಡರ , ಮಂಜು ವಿಶ್ವರ, ರಾಜು ಎಲಿಗಾರ ಉಪಸ್ಥಿತರಿದ್ದರು.

ಪದಾಧಿಕಾರಿಗಳು: ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಆಲಮಟ್ಟಿ ಹೊಸ ಶಾಖೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕಸ್ತೂರಿ ವಡ್ಡರ, ಪ್ರಧಾನ ಕಾರ್ಯದರ್ಶಿಯಾಗಿ ಸುವಣಾ೯ ಬೇನಸೂರ, ಕೋಶ್ಯಾಧ್ಯಕ್ಷರಾಗಿ ಹಣಮವ್ವ ವಡ್ಡರ, ಸಂಘಟನಾಧ್ಯಕ್ಷರಾಗಿ ಪುಳಿಯವ್ವ ವಡ್ಡರ ನೇಮಕ ಮಾಡಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನೈತಿಕ ಮೌಲ್ಯದಿಂದ ಸುಂದರ ಭವಿಷ್ಯ- ಹೇಮಗಿರಿಮಠ

ಉತ್ತರಪ್ರಭ ಸುದ್ದಿಆಲಮಟ್ಟಿ: ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಭವಿಷ್ಯ ರೂಪಗೊಳ್ಳುತ್ತದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ…

ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ

ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.

ಕರವೇ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ

ತಾಲೂಕಿನ ಸಾಸರವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಪದಾಧಿಕಾರಿಗಳನ್ನು ತಾಲೂಕಾಧ್ಯಕ್ಷ ಬಸವರಾಜ ವಡವಿ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.

ಅತಿವೃಷ್ಟಿಯಿಂದ ರಾಜ್ಯದಲ್ಲಾದ ನಷ್ಟ ಎಷ್ಟು ಗೊತ್ತಾ..?

ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.