ನಿಡಗುಂದಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಹಾಗೂ ಬಿಜೆಪಿ ಬಸವನಬಾಗೇವಾಡಿ ಮಂಡಲ ವತಿಯಿಂದ ಉಚಿತ ಆರೋಗ್ಯ ಶಿಬಿರ,ಉಚಿತ ಔಷಧ ವಿತರಣೆ ಹಾಗೂ ರಕ್ತದಾನ ಶಿಬಿರ ನಿಡಗುಂದಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಕುರಿತು ಬುಧವಾರ ಪತ್ರಕರ್ತರಿಗೆ ಮಾಹಿತಿ ನೀಡಿದ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸದಸ್ಯ, ಪಟ್ಟಣ ಪಂಚಾಯ್ತಿ ನಾಮನಿರ್ದೇಶನ ಸದಸ್ಯ ಡಾ ಸಂಗಮೇಶ ಗೂಗಿಹಾಳ, ಇದೇ 23 ಶುಕ್ರವಾರ, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಆರೋಗ್ಯ ಶಿಬಿರ ನಡೆಯಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಸೆ 17 ರಿಂದ ಅ 2 ರವರೆಗೆ ಬಿಜೆಪಿ ವತಿಯಿಂದ ಜಿಲ್ಲೆಯ ನಾನಾ ಕಡೆ ಸೇವಾ ಪಾಕ್ಷಿಕ ಅಂಗವಾಗಿ ವಿವಿಧ ಆರೋಗ್ಯ ಶಿಬಿರಗಳು ನಡೆಯುತ್ತಿವೆ. ಅದರ ಅಂಗವಾಗಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ಶಿಬಿರದಲ್ಲಿ ಮಧುಮೇಹ ತಜ್ಞರು, ನೇತ್ರ ತಜ್ಞರು, ಮೆಡಿಸಿನ್ ತಜ್ಞರು, ಸರ್ಜನ್, ಶ್ವಾಸಕೋಶ ತಜ್ಞರು, ಮೂಲವ್ಯಾಧಿ ತಜ್ಞರು, ಉದರ ರೋಗ ಶಸ್ತ್ರಚಿಕಿತ್ಸಕರು, ಮೂಳೆರೋಗ ತಜ್ಞರು, ದಂತ ವೈದ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ವಿಜಯಪುರ, ಬಾಗಲಕೋಟೆ ತಜ್ಞರ ಜತೆಗೆ ನಿಡಗುಂದಿಯ ಎಲ್ಲಾ ವೈದ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು. ತಜ್ಞ ವೈದ್ಯರು ಬರೆದಿರುವ ಔಷಧಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದರು.

Leave a Reply

Your email address will not be published. Required fields are marked *

You May Also Like

ಆಲಮಟ್ಟಿಯಲ್ಲಿ ಆದ್ದೂರಿ ವಾಷಿ೯ಕ ಸ್ನೇಹ ಸಮ್ಮೇಳನ- ಮನರಂಜನಾ ಲೋಕ ಅನಾವರಣ ಸಾಂಸ್ಕೃತಿಕ ಕಲರವ…ಮಕ್ಕಳ ಸಂಭ್ರಮ..!

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಇಲ್ಲಿನ ಎಸ್.ವ್ಹಿ. ವ್ಹಿ ಸಂಸ್ಥೆಯಡಿಯಲ್ಲಿನ ವಿವಿಧ ಶಾಲಾ,ಕಾಲೇಜುಗಳ ವಾಷಿ೯ಕ ಸ್ನೇಹ…

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ಸಚಿವ ಸಿ ಸಿ ಪಿ ಕ್ಷಮೆ ಯಾಚಿಸಲಿ: ಅರಬರ್

ಉತ್ತರಪ್ರಭ ಸುದ್ದಿ ಗದಗ: ಮೆಣಿಸಗಿ ಗ್ರಾಮದಲ್ಲಿ ಹರಿಜನ ಗಿರಿಜನ ಅಭಿವೃದ್ಧಿ ವಿವಿಧ ಕಾಮಗಾರಿ ಚಾಲನೆ ನೀಡಿ…