ಉತ್ತರಪ್ರಭ ಸುದ್ದಿ
ಆಲಮಟ್ಟಿ:
ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇನ್ನಷ್ಟು ಸರಳಗೊಂಡಿವೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಳಿಸಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಸಂಘದ ನಿರಂತರ ಪ್ರಯತ್ನದ ಫಲವಾಗಿ ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆ ಮಂಡನೆಯಾಗಿದೆ ಎಂದಿದ್ದಾರೆ.

ಹತ್ತು ವರ್ಷದ ಸೇವೆ, ಅಖಂಡ 15 ವರ್ಷದ ಸೇವೆಯನ್ನು ಪರಿಗಣಿಸಿ ಶಿಕ್ಷಕರಿಗೆ ಶೇ.25 ರಷ್ಟು ಖಾಲಿ ಹುದ್ದೆಗಳ ಮಿತಿಯಿಲ್ಲದೆ ಖಾಲಿ ಹುದ್ದೆಗಳಿಗೆ ವರ್ಗಾವಣೆಗೆ ಅವಕಾಶ,ಪರಸ್ಪರ ವರ್ಗಾವಣೆಗೆ ಸಂಬಂಧಿಸಿದಂತೆ ಸೇವೆಗೆ ಸೇರಿದ ಮೊದಲ 5 ವರ್ಷ, ನಿವೃತ್ತಿ ಹೊಂದಲು ಮೊದಲಿನ 5 ವರ್ಷ ಹೊರತುಪಡಿಸಿ ಉಳಿದ ಸಂದರ್ಭದಲ್ಲಿ ಪರಸ್ಪರ ವರ್ಗಾವಣೆಗೆ ಅವಕಾಶ, ಪ್ರತಿ 3 ವರ್ಷಕೊಮ್ಮೆ ಸೇವಾವಧಿಯಲ್ಲಿ ಎಷ್ಟು ಬಾರಿ ಬೇಕಾದರೂ ಪರಸ್ಪರ ವರ್ಗಾವಣೆ ಹೊಂದಲು ಅವಕಾಶ ದೊರೆತಿದೆ ಎಂದರು.

ಪತಿ‌ ಪತ್ನಿ ಪ್ರಕರಣದಲ್ಲಿ ಪತಿ ಅಥವಾ ಪತ್ನಿ ಕೆಲಸ ಮಾಡುವ ತಾಲ್ಲೂಕುಗಳಲ್ಲಿ ಖಾಲಿ ಹುದ್ದೆಗಳು ಲಭ್ಯತೆ ಇಲ್ಲದೇ ಹೋದಲ್ಲಿ ಪಕ್ಕದ ತಾಲ್ಲೂಕಿಗೆ ವರ್ಗಾವಣೆ ಹೊಂದಲು ಅವಕಾಶ, ಶೇ. 25 ಕ್ಕಿಂತ ಖಾಲಿ ಹುದ್ದೆಗಳಿರುವ ತಾಲ್ಲೂಕಿನ ಒಳಗಡೆ ಕೂಡ ವರ್ಗಾವಣೆ ಹೊಂದಲು ಅವಕಾಶ ಕಲ್ಪಿಸಲಾಗಿದೆ. ಸಿಆರ್‌ಪಿ, ಬಿಆರ್‌ಪಿಯಾಗಿ 3ವರ್ಷ ಅಥವಾ 5ವರ್ಷ ಸೇವೆ ಪೂರೈಸಿರುವವರಿಗೆ ಶಾಲೆಗೆ ಹೋಗಲು ಕೌನ್ಸಿಲಿಂಗ್‌ನಲ್ಲಿ ಅವಕಾಶ. ಯಾವುದೇ ಆದ್ಯತೆಯನ್ನು ಸೇವಾವಧಿಯಲ್ಲಿ ಒಂದು ಬಾರಿ ಮಾತ್ರ ಪಡೆಯತಕ್ಕದ್ದು. ಮಲೆನಾಡು ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಹಾಗೂ ಹೈದ್ರಾಬಾದ್-ಕರ್ನಾಟಕದ ತಾಲ್ಲೂಕುಗಳಿಗೆ ಒಳಗಡೆ ಬರುವವರಿಗೆ ಯಾವುದೇ ವರ್ಗಾವಣೆ ಮಿತಿಯಿಲ್ಲ ಎಂಬ ಅಂಶವನ್ನು ವಿಧೇಯಕದಲ್ಲಿ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ಅಂಶಗಳನ್ನು ತಿದ್ದುಪಡಿ ಮಾಡುವುದರ ಮೂಲಕ ರಾಜ್ಯದ ಸಮಸ್ತ ಶಿಕ್ಷಕರಿಗೆ ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ ನಾಗೇಶ್, ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತ ಆರ್ವಿಶಾಲ್ ಹಾಗೂ ಪ್ರಾಥಮಿಕ ಶಿಕ್ಷಣದ ನಿರ್ದೇಶಕ ಪ್ರಸನ್ನಕುಮಾರ ಅವರಿಗೆ ರಾಜ್ಯದ ಸಮಸ್ತ ಶಿಕ್ಷಕರ ಪರವಾಗಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಭಿನಂದನೆ ಸಲ್ಲಿಸಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಕ್ಷಕರ ವರ್ಗಾವಣೆ : ಗಣಕೀಕೃತ ಕೌನ್ಸಿಲಿಂಗ್

2021-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ನಡೆಸಲಾಗುತ್ತಿದೆ.

ಮಕ್ಕಳಿಗೆ ಕೊರೊನಾ ಚಿಕಿತ್ಸೆ ಬಗ್ಗೆ ಸರ್ಕಾರದ ಬಳಿ ಪ್ರೊಟೊಕಾಲ್ ಇಲ್ವಂತೆ – ಶಾಸಕ ಎಚ್.ಕೆ.ಪಾಟೀಲ್ ಆರೋಪ

ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ವಿಪ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಸ್ತಿ ಎಷ್ಟು? : ಮಾಡಿದ ಸಾಲ ಎಷ್ಟು..?

ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224…

ದಿಢೀರನೆ ದೆಹಲಿಗೆ ಹಾರಿದ ಕೆಪಿಸಿಸಿ ಅಧ್ಯಕ್ಷ!! ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡೋಕಾ?

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದ ಬೆನ್ನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.